22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಜು.1ರಂದು ಎಸ್.ಡಿ.ಎಂ ಸಭಾಭವನದಲ್ಲಿ ನಡೆಯಿತು.


ಕಾಯ೯ಕ್ರಮದಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡಿ.ಸಿ ರಾಜೇಶ್ ಶೆಟ್ಟಿ, ಪುತ್ತೂರು ವಿಭಾಗದ ಡಿ.ಸಿ ಅಮಲಿಂಗಯ್ಯ ವಸು ಪೂಜಾರಿ, ಕೆಎಸ್ಸಾರ್ಟಿಸಿ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಧಮ೯ಸ್ಥಳದಿಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಹೋಗುವ ಬಸ್ ಗಳು, ಶಾಲಾ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ಗಳ ಓಡಾಟ ಬಗ್ಗೆ ನಾಗರಿಕರು ಅಭಿಪ್ರಾಯಪಟ್ಟರು. ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬರಬೇಕು, ಶನಿವಾರ ಗ್ರಾಮೀಣ ಪ್ರದೇಶಗಳಿಗೆ ಶಾಲಾ ಮಕ್ಕಳ ಅನುಕೂಲವಾಗುವ ರೀತಿಯಲ್ಲಿ ಬಸ್ ಬರಬೇಕು ಎಂದು ಶಾಲಾ ವಿದ್ಯಾರ್ಥಿಗಳು ಆಗ್ರಹಿಸಿದರು.

ಬೆಳ್ತಂಗಡಿ – ವೇಣೂರು ಸರಕಾರಿ ಬಸ್, ಬೆಳ್ತಂಗಡಿ – ಪೆರಾಡಿ, ಕಾಶಿಪಟ್ಣ ಬಸ್, ಪಟ್ರಮೆ, ದಿಡುಪೆ, ನೆರಿಯ, ಕಾಯ೯ತ್ತಡ್ಕ ಮೊದಲಾದ ಪ್ರದೇಶಗಳಲ್ಲಿ ಬಸ್ಸಿನ ಬೇಡಿಕೆ ವ್ಯಕ್ತವಾಯಿತು.
ಸಭೆಯಲ್ಲಿ ವಾಣಿ ಕಾಲೇಜು ಪ್ರಾಂಶುಪಾಲ ಯದುಪತಿ ಗೌಡ, ಸುಧಾಕರ ಅರಿಸಿನ ಮಿಕ್ಕಿ, ರತ್ನಾಕರ್ ಬುಣ್ಣನ್, ಭಾರತಿ ಶೆಟ್ಟಿ ಕುವೆಟ್ಟು, ಮಾಧವ ಶಿಲಾ೯ಲು, ದಿನೇಶ್ ಖಂಡಿಗಾ, ಆಶಾ ಸಲ್ದಾನಾ, ದೀಕ್ಷಿತ್ ದಿಡುಪೆ, ಶಿಶಿಲ ಗ್ರಾ.ಪಂ ಅಧ್ಯಕ್ಷ, ಮೊದಲಾದವರು ಸೇರಿದಂತೆ ಹಲವು ಮಂದಿ ಬೇಡಿಕೆ ಸಲ್ಲಿಸಿದರು.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya
error: Content is protected !!