22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

ಬೆಳ್ತಂಗಡಿ: ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು, ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ 1.10 ರಲ್ಲಿರುವ ಅಂಬಡಬೆಟ್ಟು ಸೇತುವೆಯು ಹಳೆಯದಾಗಿದ್ದು ಘನ ವಾಹನಗಳ ಸಂಚಾರವನ್ನು ಅನಾನುಕೂಲವಾಗಿದ್ದು ತಾತ್ಕಾಲಿಕವಾಗಿ ನಿಷೇಧಿಸಲಾಗಿದ್ದು ಬದಲಿ ರಸ್ತೆಯನ್ನು ಅನುಸರಿಸುವಂತೆ ತಿಳಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು, ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ 1.10 ರಲ್ಲಿರುವ ಅಂಬಡಬೆಟ್ಟು ಸೇತುವೆಯು ಸುಮಾರು 40 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, ಕೆ.ಎಸ್.ಆರ್.ಟಿ.ಸಿ ಬಸ್, ಶಾಲಾ ವಾಹನಗಳು ಹಾಗೂ ಇತರೆ ವಾಹನಗಳು ಸಂಚರಿಸುವ (ಉಜಿರೆಯಿಂದ ಇಂದಬೆಟ್ಟು ಕಡೆಗೆ) ಪ್ರಮುಖ ಸಂಪರ್ಕ ಹೊಂದಿರುವ ಸೇತುವೆಯಾಗಿರುತ್ತದೆ. ಸೇತುವೆಯು ಹಳೆಯದಾಗಿದ್ದು ಶಿಥಿಲಾವಸ್ಥೆಯಲ್ಲಿರುವುದರಿಂದ, ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ, ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ.

ಘನ ವಾಹನಗಳು ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಈ ಕೆಳಗಿನಂತೆ ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸಬಹುದಾಗಿದೆ:

1) ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ದ್ವಾರದಿಂದ – ಸುರ್ಯ ದೇವಸ್ಥಾನ ಮಾರ್ಗವಾಗಿ – ಕೇಳ್ತಾಜೆ ಮುಖಾಂತರ ಸಂಚರಿಸುವುದು. 2) ಬೆಳ್ತಂಗಡಿ-ಕಿಲ್ಲೂರು-ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ.ಕಾಲೋನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ – ರಾಜ್ಯ ಹೆದ್ದಾರಿ-276 ರಸ್ತೆಯಾದ ಸುಳ್ಯ ಪೈಚಾರು ಬೆಳ್ಳಾರೆ ಸವಣೂರು ಕುದ್ಮಾರು ಅಲಂಕಾರು ಸುರುಳಿ ಮಾದೇರಿ ಪಟ್ರಮೆ ಧರ್ಮಸ್ಥಳ ಮುಂಡಾಜೆ ದಿಡುಪೆ ರಸ್ತೆಯನ್ನು ಸಂಪರ್ಕಿಸುವುದು.

ಈ ಬಗ್ಗೆ ಕಾರ್ಯನಿರ್ವಾಹಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಮಂಗಳೂರು ವಿಭಾಗ, ಮಂಗಳೂರು ಇವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಅವಲೋಕಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ನೀಡಿದ್ದಾರೆ.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya
error: Content is protected !!