24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು , ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ಎಚ್ಚೆತ್ತ ನಾವೂರು ಗ್ರಾಮ ಪಂಚಾಯತ್ ಇದೀಗ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು ನಿಷೇಧಿಸಿ ಬೋರ್ಡ್ ಅವಳವಡಿಸಿದೆ.

ಈ ಸೇತುವೆಯ ಎರಡೂ ಕಡೆಯ ತಡೆಗೋಡೆಗಳು 2019 ರ ಭೀಕರ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೊಚ್ಚಿ ಹೋಗಿತ್ತು. ಸೇತುವೆಯ ಅಡಿ ಭಾಗದಲ್ಲಿ ಕಾಂಕ್ರೀಟ್ ಕಿತ್ತು ಹೋಗಿ ಕಬ್ಬಿಣದ ಸರಳು ಕಾಣುತ್ತಿದೆ. ಇಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹಲವಾರು ಬಾರಿ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಕಳೆದ ಚುನಾವಣೆಯ ಸಂದರ್ಭದಲ್ಲಿ ಈ ಪ್ರದೇಶದ ನಾಗರಿಕರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದರು. ಆಗ ಆ ಪ್ರದೇಶಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ , ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದ್ದರು.

ಇದೀಗ ಜನರ ಆಕ್ರೋಶವನ್ನು ಶಮನಗೊಳಿಸಲು ಸೇತುವೆ ಶಿಥಿಲವಾಗಿದ್ದು ಘನ ವಾಹನ ಸಂಚಾರವನ್ನು ನಿಷೇಧಿಸಿದೆ. ಜೊತೆಗೆ ಸೇತುವೆಯ ಎರಡೂ ಬದಿಗಳಲ್ಲಿ ದುರ್ಬಲಗೊಂಡ ಕಾರಣ ಶಾಲಾ ಮಕ್ಕಳು , ಸಾರ್ವಜನಿಕರು ಸಂಚರಿಸುವಾಗ ಎಚ್ಚರಿಕೆ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.

Related posts

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya
error: Content is protected !!