22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು , ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ಎಚ್ಚೆತ್ತ ನಾವೂರು ಗ್ರಾಮ ಪಂಚಾಯತ್ ಇದೀಗ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು ನಿಷೇಧಿಸಿ ಬೋರ್ಡ್ ಅವಳವಡಿಸಿದೆ.

ಈ ಸೇತುವೆಯ ಎರಡೂ ಕಡೆಯ ತಡೆಗೋಡೆಗಳು 2019 ರ ಭೀಕರ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೊಚ್ಚಿ ಹೋಗಿತ್ತು. ಸೇತುವೆಯ ಅಡಿ ಭಾಗದಲ್ಲಿ ಕಾಂಕ್ರೀಟ್ ಕಿತ್ತು ಹೋಗಿ ಕಬ್ಬಿಣದ ಸರಳು ಕಾಣುತ್ತಿದೆ. ಇಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹಲವಾರು ಬಾರಿ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಕಳೆದ ಚುನಾವಣೆಯ ಸಂದರ್ಭದಲ್ಲಿ ಈ ಪ್ರದೇಶದ ನಾಗರಿಕರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದರು. ಆಗ ಆ ಪ್ರದೇಶಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ , ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದ್ದರು.

ಇದೀಗ ಜನರ ಆಕ್ರೋಶವನ್ನು ಶಮನಗೊಳಿಸಲು ಸೇತುವೆ ಶಿಥಿಲವಾಗಿದ್ದು ಘನ ವಾಹನ ಸಂಚಾರವನ್ನು ನಿಷೇಧಿಸಿದೆ. ಜೊತೆಗೆ ಸೇತುವೆಯ ಎರಡೂ ಬದಿಗಳಲ್ಲಿ ದುರ್ಬಲಗೊಂಡ ಕಾರಣ ಶಾಲಾ ಮಕ್ಕಳು , ಸಾರ್ವಜನಿಕರು ಸಂಚರಿಸುವಾಗ ಎಚ್ಚರಿಕೆ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.

Related posts

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya
error: Content is protected !!