23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಸಾಹಿತಿ ಪ್ರೊ ಎನ್ ಜಿ ಪಟವರ್ಧನ್ ವಿಧಿವಶ

ಉಜಿರೆ: ತಾಲೂಕಿನ ಹಿರಿಯ ಸಾಹಿತಿ ಪ್ರೋ| ಎನ್.ಜಿ ಪಟವರ್ಧನ್ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ೩೩ ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಎನ್.ಜಿ ಪಟವರ್ಧನ್ ಅವರು ಆನೇಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ತಾಲೂಕಿನ ಪ್ರಖ್ಯಾತ ಸಾಹಿತಿಗಳಲ್ಲಿ ಓರ್ವರಾಗಿದ್ದ ಅವರ ಆನೇಕ ಕವನ, ಹನಿಗವನ, ಕಥೆ, ಕಾದಂಬರಿ ಕೃತಿಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷತೆಯನ್ನು ವಹಿಸಿ ಯಶಸ್ವಿಯಾಗಿ ನಿರ್ವಹಿಸಿದ್ದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರುವ ಎನ್.ಜಿ ಪಟವರ್ಧನ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya
error: Content is protected !!