July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಇದರ ಮೊದಲನೇ ವರ್ಷಕ್ಕೆ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಶೈಕ್ಷಣಿಕ ವಿಷಯಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮ ಓರಿಯಂಟೇಷನ್ ಕಾರ್ಯಕ್ರಮ 2024 ಆಯೋಜನೆ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕಾಲೇಜು ಮತ್ತು ಅವರ ಆಯ್ಕೆಯ ಕೋರ್ಸುಗಳ ಬಗ್ಗೆ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಿವಿಲ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ತೃಪ್ತಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ತೆ ಶ್ರೀಮತಿ ಮೇರಿ ಸ್ಮಿತಾ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ದಿನೇಶ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಉಪಸ್ಥಿತರಿದ್ದರು.

ಕಾರ್ಯಕ್ರಮವು ಕಾಲೇಜಿನ ಪ್ರಾದ್ಯಾಪಕರುಗಳಾದ ಈಶ್ವರ್ , ಸಾಯಿ ಚರಣ್ ಇವರ ಪ್ರಾರ್ಥನೆಯೊಂದಿಗೆ ಆರಂಭಗೊಂಡು ಶಿವಪ್ರಸಾದ್ ಸ್ವಾಗತಿಸಿದರು. ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಈಶ್ವರ್ ಶರ್ಮಾ ವಂದಿಸಿದರು. ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರು ಕಾಲೇಜು ಸಿಬ್ಬಂದಿಗಳು ಸಾಕ್ಷಿಯಾದರು.

Related posts

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya
error: Content is protected !!