25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

ಬೆಳ್ತಂಗಡಿ; ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಬಂಧಿಸಿದ್ದಾರೆ.


ಬೆಳ್ಳಾರೆಯಲ್ಲಿ ಮನೆಗೆ ನುಗ್ಗಿ ಸುಮಾರು ರೂ 1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000/- ಸೇರಿ ಒಟ್ಟು ರೂ 1,78,000/- ಮೌಲ್ಯದ ಮನೆಕಳ್ಳತನ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ ಪೊಲೀಸರು ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಬಂಧಿಸಿ ಆತನಿಂದ ಕಳವು ಮಾಡಿದ ಸೊತ್ತು ಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿರುತ್ತದೆ.

ಪ್ರಕರಣದ ಪತ್ತೆಗಾಗಿ ಕಾರ್ಯದಲ್ಲಿ, ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್, ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಎಂ ಮತ್ತು ರಾಜೇಂದ್ರರವರುಗಳ ಮಾರ್ಗದರ್ಶನದಲ್ಲಿ, ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ರವರ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆಯವರು ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂಧಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತಾರೆ. ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ವಿಶೇಷ ಬಹುಮಾನ ಘೋಷಿಸಿದ್ದಾರೆ.

Related posts

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya
error: Content is protected !!