July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಕೊಯ್ಯೂರು : “ನಾಯಕನಾಗಲು ಕಠಿಣ ಪರಿಶ್ರಮ ಪಡಬೇಕು. ಜೀವನದಲ್ಲಿ ಶಿಸ್ತು ಮತ್ತು ಸಂಸ್ಕಾರಗಳನ್ನು ರೂಢಿಸಿಕೊಂಡಾಗ ಮಾತ್ರ ಸಮರ್ಥ ನಾಯಕನಾಗಲು ಸಾಧ್ಯವಿದೆ”ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮ್ಯಾನೇಜರ್ ಬಾಲಕೃಷ್ಣ ಪೂಜಾರಿ ಬಜೆಗುತ್ತು ತಿಳಿಸಿದರು.

ಅವರು ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಇಂದಿನ ಹದಿಹರೆಯದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದು ಖೇದಕರ ಸಂಗತಿ ಎಂದು ಅಭಿಪ್ರಾಯಪಟ್ಟರು. ಕೊಯ್ಯೂರು ಗ್ರಾಮಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ದಯಾಮಣಿ ದೀಪಪ್ರಜ್ವಲನೆಗೈದು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಮೋಹನ ಗೌಡ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಕೊಯ್ಯೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾ ಕೃಷ್ಣ ತಚ್ಛಮೆ, ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪಾoಬೇಲ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃತಿಕ್, ಕಾರ್ಯದರ್ಶಿ ಪ್ರಜ್ಞಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಾಲಕೃಷ್ಣ ಪೂಜಾರಿ ಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ವಿದ್ಯಾರ್ಥಿನಿಯರಾದ ಭವ್ಯ, ಪ್ರಮಿತ, ಪ್ರಜ್ಞಾ, ನಿಶ್ಮಿತಾ, ಕವಿತ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಪ್ರಾಸ್ತವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ವಂದಿಸಿದರು. ಉಪನ್ಯಾಸಕರಾದ ಮಾಯಿಲ, ಸಂತೋಷ್, ಕುಮಾರಿ ತೃಪ್ತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರಶ್ಮಿದೇವಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya
error: Content is protected !!