September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

ಬೆಳ್ತಂಗಡಿ : ಜು.1 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜು.1 ರಂದು ರಾತ್ರಿ ಯಕ್ಷಗಾನ ವೈಭವ ಜರುಗಿತು.
ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ, ಸುರೇಶ ಕುಮಾರ್ ಆರ್.ಎನ್. ಅಶೋಕ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಲಾವಿದರಿಗೆ ಶಾಲು ಹೊದಿಸಿ ಗೌರವಿಸಿದರು.


ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಮಳೆಗಾಲದ ಮಹೋನ್ನತ ತೆಂಕು ಮತ್ತು ಬಡಗು ಸಂಯೋಜನೆಯಲ್ಲಿ ಭಾಗವತರಾಗಿ ಸತೀಶ ಶೆಟ್ಟಿ ಪಟ್ಲ,ಸೃಜನ್ ಹೆಗಡೆ, ಸುಧೀರ್ ಭಟ್ ಪೆರ್ಡೂರು, ಶಶಾಂಕ ಎಲಿಮಲೆ,ಹಿಮ್ಮೇಳ ತೆಂಕು:ಗುರು ಪ್ರಸಾದ್ ಬೊಳಿಂಜಡ್ಕ,ಕೌಶಿಕ್ ರಾವ್ ಪುತ್ತಿಗೆ,ಬಡಗು:ಶಶಿಕುಮಾರ್ ಆಚಾರ್ಯ ಉಡುಪಿ,ಪ್ರಜ್ವಲ್ ಕುಮಾರ್ ಮುಂದಾಡಿ, ಚಕ್ರತಾಳ: ಸುಂದರ ನಾಯ್ಕಪಾಣಾಜೆ, ನಿರೂಪಣೆ: ವಿನಾಯಕ ಭಟ್ ಗಾಳಿಮನೆ ಯಕ್ಷ ವೈಭವ ವನ್ನು ನಡೆಸಿದರು.


ನಾಳ ಯಕ್ಷಕೂಟ ಅಧ್ಯಕ್ಷರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವ ವಹಿಸಿದ್ದರು. ದೇವಸ್ಥಾನದ ವಿವಿಧ ಸಮಿತಿಯ ಸದಸ್ಯರು,ಹಿರಿಯ ಯಕ್ಷಗಾನ ಕಲಾವಿದರು ಹಾಗೂ ಕಲಾಭಿಮಾನಿಗಳು ಭಾಗವಹಿಸಿದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಸದಸ್ಯ,ನಾಳ ಯಕ್ಷ ಕೂಟ ಕಾರ್ಯದರ್ಶಿ ರಾಘವ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!