ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಕೊಕ್ರಾಡಿ ಗ್ರಾಮದ ಹೊಸಮಜಲು ನಿವಾಸಿ ಸ್ಯಾಮುವೆಲ್ ಎಂ.ಐ ನೆಲ್ಯಾಡಿ ಅವರಿಗೆ ಜೂ.30ರಂದು ಮಂಗಳೂರಿನ ಕಮಿಷನರ್ ಆಫೀಸ್ ನಲ್ಲಿ ಇಲಾಖೆಗೆ ಸಲ್ಲಿಸಿದ ಪ್ರಾಮಾಣಿಕ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು.


1993 ರಿಂದ 2024ರ ವರೆಗೆ 31 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರು ಮಂಗಳೂರಿನ ಸಂಚಾರಿ ಪೂರ್ವ ಪೊಲೀಸ್ ಠಾಣೆ, ಸುಬ್ರಮಣ್ಯ, ಕಡಬಗಳಲ್ಲಿ ಸೇವೆ ಸಲ್ಲಿಸಿ ಬಳಿಕ ಹೆಡ್ ಕಾನ್ ಸ್ಟೇಬಲ್ ಆಗಿ ಭಡ್ತಿ ಹೊಂದಿ ಜಿಲ್ಲಾ ಎಸ್.ಪಿ ಕಚೇರಿಯಲ್ಲಿ ಪಾಸ್ ಪೋರ್ಟ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಧರ್ಮಸ್ಥಳ ಆರಕ್ಷಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಎ ಎಸ್ ಐ ಆಗಿ ಪುಂಜಾಲಕಟ್ಟೆ ಠಾಣೆ, ಬಳಿಕ ಕಳೆದ 3 ವರ್ಷಗಳಿಂದ ಧರ್ಮಸ್ಥಳ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ವಿವಿಐಪಿ ರಿಂಗ್ ರೌಂಡ್ ಕಮಾಂಡೋ ತರಬೇತಿ ಹೊಂದಿದ್ದ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಇಂಟೆಲಿಜೆನ್ಸ್ ವಿಭಾಗದಲ್ಲಿ ನಿರ್ವಹಿಸಿದ ಸೇವೆಗೆ ಪೊಲೀಸ್ ವರಿಷ್ಟಾಧಿಕಾರಿಗಳ ವಿಶೇಷ ಪ್ರಶಂಸೆಗೆ ಭಾಜನರಾಗಿದ್ದರು.


ಜಿಲ್ಲೆಯಲ್ಲಿ ನಡೆದ ಕೆಲವು ಕಳ್ಳತನ ಪ್ರಕರಣಗಳನ್ನು ಭೇದಿಸಿ ಆಗಿನ ಎಸ್ ಪಿ ಸುಬ್ರಮಣ್ಯೇಶ್ವರ ರಾವ್ ಹಾಗೂ ಪಶ್ಚಿಮ ವಲಯ ಐಜಿಪಿ ಗೋಪಾಲ ಹೊಸೂರ್ ರವರ ವಿಶೇಷ ಪುರಸ್ಕಾರ ಪಡೆದಿದ್ದರು. ತನ್ನ ನಿಷ್ಠೆ, ಸಮಯ ಬದ್ಧತೆ ಹಾಗೂ ಪ್ರಾಮಾಣಿಕ ಸೇವೆಯಿಂದ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಗೌರವಕ್ಕೆ ಪಾತ್ರರಾಗಿದ್ದರು.


ಪ್ರಸ್ತುತ ಪತ್ನಿ ಪಡುಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಜಿಸ್ಸಿ.ಕೆ.ಎ, ಪುತ್ರ ಮರ್ಚೆಂಟ್ ನೇವಿಯಲ್ಲಿ ಉದ್ಯೋಗದಲ್ಲಿರುವ ಅಜೇಯ್, ಸೊಸೆ ಸಹನಾ, ಪುತ್ರಿ ಅನನ್ಯ ಅವರೊಂದಿಗೆ ಹೊಸಮಜಲಿನಲ್ಲಿ ವಾಸ್ತವ್ಯ ಹೊಂದಿದ್ದಾರೆ.

Related posts

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!