25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಕೊಕ್ರಾಡಿ ಗ್ರಾಮದ ಹೊಸಮಜಲು ನಿವಾಸಿ ಸ್ಯಾಮುವೆಲ್ ಎಂ.ಐ ನೆಲ್ಯಾಡಿ ಅವರಿಗೆ ಜೂ.30ರಂದು ಮಂಗಳೂರಿನ ಕಮಿಷನರ್ ಆಫೀಸ್ ನಲ್ಲಿ ಇಲಾಖೆಗೆ ಸಲ್ಲಿಸಿದ ಪ್ರಾಮಾಣಿಕ ಸೇವೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು.


1993 ರಿಂದ 2024ರ ವರೆಗೆ 31 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರು ಮಂಗಳೂರಿನ ಸಂಚಾರಿ ಪೂರ್ವ ಪೊಲೀಸ್ ಠಾಣೆ, ಸುಬ್ರಮಣ್ಯ, ಕಡಬಗಳಲ್ಲಿ ಸೇವೆ ಸಲ್ಲಿಸಿ ಬಳಿಕ ಹೆಡ್ ಕಾನ್ ಸ್ಟೇಬಲ್ ಆಗಿ ಭಡ್ತಿ ಹೊಂದಿ ಜಿಲ್ಲಾ ಎಸ್.ಪಿ ಕಚೇರಿಯಲ್ಲಿ ಪಾಸ್ ಪೋರ್ಟ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಧರ್ಮಸ್ಥಳ ಆರಕ್ಷಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಎ ಎಸ್ ಐ ಆಗಿ ಪುಂಜಾಲಕಟ್ಟೆ ಠಾಣೆ, ಬಳಿಕ ಕಳೆದ 3 ವರ್ಷಗಳಿಂದ ಧರ್ಮಸ್ಥಳ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ವಿವಿಐಪಿ ರಿಂಗ್ ರೌಂಡ್ ಕಮಾಂಡೋ ತರಬೇತಿ ಹೊಂದಿದ್ದ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಇಂಟೆಲಿಜೆನ್ಸ್ ವಿಭಾಗದಲ್ಲಿ ನಿರ್ವಹಿಸಿದ ಸೇವೆಗೆ ಪೊಲೀಸ್ ವರಿಷ್ಟಾಧಿಕಾರಿಗಳ ವಿಶೇಷ ಪ್ರಶಂಸೆಗೆ ಭಾಜನರಾಗಿದ್ದರು.


ಜಿಲ್ಲೆಯಲ್ಲಿ ನಡೆದ ಕೆಲವು ಕಳ್ಳತನ ಪ್ರಕರಣಗಳನ್ನು ಭೇದಿಸಿ ಆಗಿನ ಎಸ್ ಪಿ ಸುಬ್ರಮಣ್ಯೇಶ್ವರ ರಾವ್ ಹಾಗೂ ಪಶ್ಚಿಮ ವಲಯ ಐಜಿಪಿ ಗೋಪಾಲ ಹೊಸೂರ್ ರವರ ವಿಶೇಷ ಪುರಸ್ಕಾರ ಪಡೆದಿದ್ದರು. ತನ್ನ ನಿಷ್ಠೆ, ಸಮಯ ಬದ್ಧತೆ ಹಾಗೂ ಪ್ರಾಮಾಣಿಕ ಸೇವೆಯಿಂದ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಗೌರವಕ್ಕೆ ಪಾತ್ರರಾಗಿದ್ದರು.


ಪ್ರಸ್ತುತ ಪತ್ನಿ ಪಡುಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಜಿಸ್ಸಿ.ಕೆ.ಎ, ಪುತ್ರ ಮರ್ಚೆಂಟ್ ನೇವಿಯಲ್ಲಿ ಉದ್ಯೋಗದಲ್ಲಿರುವ ಅಜೇಯ್, ಸೊಸೆ ಸಹನಾ, ಪುತ್ರಿ ಅನನ್ಯ ಅವರೊಂದಿಗೆ ಹೊಸಮಜಲಿನಲ್ಲಿ ವಾಸ್ತವ್ಯ ಹೊಂದಿದ್ದಾರೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!