23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿ ಇದರ ಸುಳ್ಯ ಶಾಖೆಯಲ್ಲಿ ಸೇನಾ ತರಬೇತಿ ಪಡೆದ ಸುಳ್ಯ ನಿವಾಸಿ ಸೃಜನ್ ಕೆ. ಆರ್.ರವರು ಅಗ್ನಿಪಥ್ ಮೂಲಕ ಭಾರತೀಯ ಭೂಸೇನೆಗೆ ಆಯ್ಕೆಗೊಂಡಿದ್ದಾರೆ.
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕೊಡ್ದೋಳು ನಿವಾಸಿ ರಾಮಕೃಷ್ಣ ರೈ ಮತ್ತು ಗೀತಾ ದಂಪತಿಯ ಪುತ್ರ ಸೃಜನ್ ಕೆ.ಆರ್. ಕರ್ತವ್ಯಕ್ಕೆ ಅಸ್ಸಾಂಗೆ ತೆರಳಿದ್ದು , ಜು.1 ರಂದು ಅಲ್ಲಿನ ಅರ್ಟಿಲ್ಲರಿ ರೆಜಿಮೆಂಟ್ ವಿಭಾಗದಲ್ಲಿ ಕರ್ತವ್ಯ ಆರಂಭಿಸಿದ್ದರೆ.

2023ರ ಫೆಬ್ರವರಿ ತಿಂಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು, ಮಂಗಳೂರಿನಲ್ಲಿ ನಡೆದ ಸೇನಾ ಪರೀಕ್ಷೆ ಎದುರಿಸಿ, ತೇರ್ಗಡೆ ಹೊಂದಿ, ಮಹಾರಾಷ್ಟ್ರ ದ ನಾಸಿಕ್‌ನಲ್ಲಿ 32 ವಾರಗಳ ಸೇನಾ ತರಬೇತಿ ಪೂರ್ಣಗೊಳಿಸಿದ್ದರು.
ತನ್ನ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಎಣ್ಮೂರು ಪ್ರೌಢಶಾಲೆಯಲ್ಲಿ, ಪಿ.ಯು ಶಿಕ್ಷಣವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೂರೈಸಿ , ನಂತರ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪದವಿ ಮುಗಿಸಿದ್ದರು. ಬಳಿಕ ಸುಳ್ಯದ ವಿದ್ಯಾಮಾತಾ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಸೇನಾ ಪರೀಕ್ಷಾ ತರಬೇತಿಯನ್ನು ಪಡೆದುಕೊಂಡು ಇದೀಗ ಭೂ ಸೇನೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈರವರು ಇವರ ಸಾಧನೆಯನ್ನು ಮೆಚ್ಚಿ , ಸೇನೆಗೆ ಆಯ್ಕೆಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ , ಅಭಿನಂದಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!