23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿ ಇದರ ಸುಳ್ಯ ಶಾಖೆಯಲ್ಲಿ ಸೇನಾ ತರಬೇತಿ ಪಡೆದ ಸುಳ್ಯ ನಿವಾಸಿ ಸೃಜನ್ ಕೆ. ಆರ್.ರವರು ಅಗ್ನಿಪಥ್ ಮೂಲಕ ಭಾರತೀಯ ಭೂಸೇನೆಗೆ ಆಯ್ಕೆಗೊಂಡಿದ್ದಾರೆ.
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕೊಡ್ದೋಳು ನಿವಾಸಿ ರಾಮಕೃಷ್ಣ ರೈ ಮತ್ತು ಗೀತಾ ದಂಪತಿಯ ಪುತ್ರ ಸೃಜನ್ ಕೆ.ಆರ್. ಕರ್ತವ್ಯಕ್ಕೆ ಅಸ್ಸಾಂಗೆ ತೆರಳಿದ್ದು , ಜು.1 ರಂದು ಅಲ್ಲಿನ ಅರ್ಟಿಲ್ಲರಿ ರೆಜಿಮೆಂಟ್ ವಿಭಾಗದಲ್ಲಿ ಕರ್ತವ್ಯ ಆರಂಭಿಸಿದ್ದರೆ.

2023ರ ಫೆಬ್ರವರಿ ತಿಂಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು, ಮಂಗಳೂರಿನಲ್ಲಿ ನಡೆದ ಸೇನಾ ಪರೀಕ್ಷೆ ಎದುರಿಸಿ, ತೇರ್ಗಡೆ ಹೊಂದಿ, ಮಹಾರಾಷ್ಟ್ರ ದ ನಾಸಿಕ್‌ನಲ್ಲಿ 32 ವಾರಗಳ ಸೇನಾ ತರಬೇತಿ ಪೂರ್ಣಗೊಳಿಸಿದ್ದರು.
ತನ್ನ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಎಣ್ಮೂರು ಪ್ರೌಢಶಾಲೆಯಲ್ಲಿ, ಪಿ.ಯು ಶಿಕ್ಷಣವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೂರೈಸಿ , ನಂತರ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪದವಿ ಮುಗಿಸಿದ್ದರು. ಬಳಿಕ ಸುಳ್ಯದ ವಿದ್ಯಾಮಾತಾ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಸೇನಾ ಪರೀಕ್ಷಾ ತರಬೇತಿಯನ್ನು ಪಡೆದುಕೊಂಡು ಇದೀಗ ಭೂ ಸೇನೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈರವರು ಇವರ ಸಾಧನೆಯನ್ನು ಮೆಚ್ಚಿ , ಸೇನೆಗೆ ಆಯ್ಕೆಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ , ಅಭಿನಂದಿಸಿದ್ದಾರೆ.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya
error: Content is protected !!