July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

ಬೆಳ್ತಂಗಡಿ: ಧಾರಾಕಾರ ಮಳೆಗೆ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು ಇದೀಗ ಬೆಳ್ತಂಗಡಿ ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡು ಒಂದು ವಾರದ ಒಳಗೆ ಸರಿಪಡಿಸಲು ಸೂಚನೆಯನ್ನು ನೀಡಿದ್ದಾರೆ.

ಜು.1 ರಂದು ವಿಪರೀತ ಮಳೆಯಿಂದಾಗಿ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಪರಿಣಾಮ ಮಕ್ಕಳನ್ನು ತುರ್ತಾಗಿ ಬೇರೆ ಕೊಠಡಿಗೆ ಸ್ಥಳಾಂತರಿಸಿದ ಶಿಕ್ಷಕರು ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಹಂಚು ಅತಿ ಶಿಥಿಲ ವ್ಯವಸ್ಥೆಗೆ ತಲುಪಿ ಕುಸಿತಗೊಂಡಿದೆ. ಆದಷ್ಟು ಬೇಗೆ ಸರಿಪಡಿಸುವಂತೆ ಅಧಿಖಾರಿಗಳಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಇಒ, ಜಿಲ್ಲಾ ಪಂಚಾಯತಿ ಇಂಜಿನಿಯರ್, ಗ್ರಾಮ ಪಂಚಾಯತಿ ಪಿಡಿಒ, ಗ್ರಾಮ ಸಹಾಯಕ, ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಉಪಸ್ಥಿತರಿದ್ದರು.

Related posts

ಉಜಿರೆ ರಬ್ಬರ್ ಸೊಸೈಟಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್, ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅಧಿಕಾರ ಸ್ವೀಕಾರ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya
error: Content is protected !!