September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

ಬೆಳ್ತಂಗಡಿ :ಮಳೆಗಾಲ ಪ್ರಾರಂಭವಾದ ನಂತರವಂತೂ ಸರಿಯಾದ ರೀತಿಯಲ್ಲಿ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆಸಿ ಸಾರ್ವಜನಿಕ ಸಂಚಾರಕ್ಕೆ ಹಾಗೂ ಶಾಲೆಯ ಬಳಿ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ತ್ವರಿತ ಗತಿಯ ಕಾಮಗಾರಿ ಮಾಡಬೇಕು ಎಂದು ಸೂಚಿಸಿದ್ದರು.ಅದರೆ ಗುತ್ತಿಗೆದಾರರ ನಿಧಾನಗತಿ ಕಾಮಗಾರಿಯಿಂದ ಶಾಲಾ ಮಕ್ಕಳಿಗೆ ಸೇರಿದಂತೆ ಜನ ಸಾಮಾನ್ಯರಿಗೆ ವಾಹನ ಸವಾರರಿಗೆ ಮತ್ತಷ್ಟು ತೊಂದರೆಯಾಗುತ್ತಿರುವ ಬಗ್ಗೆ ಮನಗಂಡು ರಾತ್ರೋರಾತ್ರಿ ಶಾಸಕ ಹರೀಶ್ ಪೂಂಜ ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರಲ್ಲದೇ ಗುತ್ತಿಗೆದಾರರ ನಿಧಾನಗತಿ ಕಾಮಗಾರಿ ಬಗ್ಗೆ ಅಸಾಮಾಧಾನ ಗೊಂಡ ಶಾಸಕರು ಒಂದು ವಾರದೊಳಗೆ ಚರಂಡಿ ಸೇರಿದಂತೆ ಪ್ರಮುಖವಾದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕೆಂದು ಸೂಚಿಸಿದರು. ಕೆಲವೊಂದು ಕಡೆಗಳಲ್ಲಿ ಕೆಸರಿನಿಂದಾಗಿ ವಾಹನ ಸವಾರರಿಗೆ ತೊಂದರೆಯಾಗಿದೆ ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಅಲ್ಲಲ್ಲಿ ಚರಂಡಿಯಲ್ಲಿ ನೀರು ನಿಂತಿರುವುದನ್ನು ಸರಿಪಡಿಸುವಂತೆ ಸೂಚಿಸಿದರು. ಭಾರೀ ಮಳೆಯ ನಡುವೆಯೂ ಶಾಸಕರು ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ತೆರಳಿ ಸಮಸ್ಯೆಗಳನ್ನು ಖುದ್ದು ವೀಕ್ಷಿಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಭೇಟಿ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಂಜಿನಿಯ‌ರ್ ಶಿವಪ್ರಸಾದ್ ಅಜಿಲ, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya
error: Content is protected !!