22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಇದರ ಮೊದಲನೇ ವರ್ಷಕ್ಕೆ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಶೈಕ್ಷಣಿಕ ವಿಷಯಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮ ಓರಿಯಂಟೇಷನ್ ಕಾರ್ಯಕ್ರಮ 2024 ಆಯೋಜನೆ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕಾಲೇಜು ಮತ್ತು ಅವರ ಆಯ್ಕೆಯ ಕೋರ್ಸುಗಳ ಬಗ್ಗೆ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಿವಿಲ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ತೃಪ್ತಿ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ತೆ ಶ್ರೀಮತಿ ಮೇರಿ ಸ್ಮಿತಾ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ದಿನೇಶ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಉಪಸ್ಥಿತರಿದ್ದರು.

ಕಾರ್ಯಕ್ರಮವು ಕಾಲೇಜಿನ ಪ್ರಾದ್ಯಾಪಕರುಗಳಾದ ಈಶ್ವರ್ , ಸಾಯಿ ಚರಣ್ ಇವರ ಪ್ರಾರ್ಥನೆಯೊಂದಿಗೆ ಆರಂಭಗೊಂಡು ಶಿವಪ್ರಸಾದ್ ಸ್ವಾಗತಿಸಿದರು. ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಈಶ್ವರ್ ಶರ್ಮಾ ವಂದಿಸಿದರು. ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರು ಕಾಲೇಜು ಸಿಬ್ಬಂದಿಗಳು ಸಾಕ್ಷಿಯಾದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya
error: Content is protected !!