38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

ಉಜಿರೆ: ಪ್ರಸ್ತುತ ಕಾಲಘಟ್ಟದಲ್ಲಿ ತಂತ್ರಜ್ಞಾನದ ಶಿಕ್ಷಣ ಅತಿ ಮುಖ್ಯವಾಗಿದೆ. ಬರೀ ವಿದ್ಯೆ ಪಡೆದರೆ ಸಾಲದು; ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ವಿದ್ಯೆಯು ಯಾರಿಂದಲೂ ಕಸಿಯಲಾಗದ ಆಸ್ತಿ. ಜೀವನದಲ್ಲಿ ವಿದ್ಯೆ ಅತಿದೊಡ್ಡ ಸಂಪತ್ತು. ಈ ಸಂಪತ್ತು ಮುಂದಿನ ಜೀವನದಲ್ಲಿ ಇನ್ನಷ್ಟು ಹೆಚ್ಚಿಸಿಕೊಳ್ಳಿ ಎಂದರು. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಇದು ನಿಮ್ಮ ಮುಂದಿನ ಉದ್ಯೋಗಕ್ಕೆ ದಾರಿದೀಪವಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಲಾಯಿಲ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿ-ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಸುರೇಶ್ ಮೊಯಿಲಿ ಇವರು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 30 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಸೋಮನಾಥ್ ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರಾದ ಜಯಶ್ರೀ ಇವರು ನಿರ್ವಹಣೆ ಮಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.

Related posts

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
error: Content is protected !!