27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

ಬೆಳ್ತಂಗಡಿ : ಜು.1 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜು.1 ರಂದು ರಾತ್ರಿ ಯಕ್ಷಗಾನ ವೈಭವ ಜರುಗಿತು.
ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ, ಸುರೇಶ ಕುಮಾರ್ ಆರ್.ಎನ್. ಅಶೋಕ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಲಾವಿದರಿಗೆ ಶಾಲು ಹೊದಿಸಿ ಗೌರವಿಸಿದರು.


ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಮಳೆಗಾಲದ ಮಹೋನ್ನತ ತೆಂಕು ಮತ್ತು ಬಡಗು ಸಂಯೋಜನೆಯಲ್ಲಿ ಭಾಗವತರಾಗಿ ಸತೀಶ ಶೆಟ್ಟಿ ಪಟ್ಲ,ಸೃಜನ್ ಹೆಗಡೆ, ಸುಧೀರ್ ಭಟ್ ಪೆರ್ಡೂರು, ಶಶಾಂಕ ಎಲಿಮಲೆ,ಹಿಮ್ಮೇಳ ತೆಂಕು:ಗುರು ಪ್ರಸಾದ್ ಬೊಳಿಂಜಡ್ಕ,ಕೌಶಿಕ್ ರಾವ್ ಪುತ್ತಿಗೆ,ಬಡಗು:ಶಶಿಕುಮಾರ್ ಆಚಾರ್ಯ ಉಡುಪಿ,ಪ್ರಜ್ವಲ್ ಕುಮಾರ್ ಮುಂದಾಡಿ, ಚಕ್ರತಾಳ: ಸುಂದರ ನಾಯ್ಕಪಾಣಾಜೆ, ನಿರೂಪಣೆ: ವಿನಾಯಕ ಭಟ್ ಗಾಳಿಮನೆ ಯಕ್ಷ ವೈಭವ ವನ್ನು ನಡೆಸಿದರು.


ನಾಳ ಯಕ್ಷಕೂಟ ಅಧ್ಯಕ್ಷರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವ ವಹಿಸಿದ್ದರು. ದೇವಸ್ಥಾನದ ವಿವಿಧ ಸಮಿತಿಯ ಸದಸ್ಯರು,ಹಿರಿಯ ಯಕ್ಷಗಾನ ಕಲಾವಿದರು ಹಾಗೂ ಕಲಾಭಿಮಾನಿಗಳು ಭಾಗವಹಿಸಿದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಸದಸ್ಯ,ನಾಳ ಯಕ್ಷ ಕೂಟ ಕಾರ್ಯದರ್ಶಿ ರಾಘವ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya
error: Content is protected !!