22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

ಬೆಳ್ತಂಗಡಿ : ಜು.1 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜು.1 ರಂದು ರಾತ್ರಿ ಯಕ್ಷಗಾನ ವೈಭವ ಜರುಗಿತು.
ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ, ಸುರೇಶ ಕುಮಾರ್ ಆರ್.ಎನ್. ಅಶೋಕ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಲಾವಿದರಿಗೆ ಶಾಲು ಹೊದಿಸಿ ಗೌರವಿಸಿದರು.


ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಮಳೆಗಾಲದ ಮಹೋನ್ನತ ತೆಂಕು ಮತ್ತು ಬಡಗು ಸಂಯೋಜನೆಯಲ್ಲಿ ಭಾಗವತರಾಗಿ ಸತೀಶ ಶೆಟ್ಟಿ ಪಟ್ಲ,ಸೃಜನ್ ಹೆಗಡೆ, ಸುಧೀರ್ ಭಟ್ ಪೆರ್ಡೂರು, ಶಶಾಂಕ ಎಲಿಮಲೆ,ಹಿಮ್ಮೇಳ ತೆಂಕು:ಗುರು ಪ್ರಸಾದ್ ಬೊಳಿಂಜಡ್ಕ,ಕೌಶಿಕ್ ರಾವ್ ಪುತ್ತಿಗೆ,ಬಡಗು:ಶಶಿಕುಮಾರ್ ಆಚಾರ್ಯ ಉಡುಪಿ,ಪ್ರಜ್ವಲ್ ಕುಮಾರ್ ಮುಂದಾಡಿ, ಚಕ್ರತಾಳ: ಸುಂದರ ನಾಯ್ಕಪಾಣಾಜೆ, ನಿರೂಪಣೆ: ವಿನಾಯಕ ಭಟ್ ಗಾಳಿಮನೆ ಯಕ್ಷ ವೈಭವ ವನ್ನು ನಡೆಸಿದರು.


ನಾಳ ಯಕ್ಷಕೂಟ ಅಧ್ಯಕ್ಷರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವ ವಹಿಸಿದ್ದರು. ದೇವಸ್ಥಾನದ ವಿವಿಧ ಸಮಿತಿಯ ಸದಸ್ಯರು,ಹಿರಿಯ ಯಕ್ಷಗಾನ ಕಲಾವಿದರು ಹಾಗೂ ಕಲಾಭಿಮಾನಿಗಳು ಭಾಗವಹಿಸಿದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಸದಸ್ಯ,ನಾಳ ಯಕ್ಷ ಕೂಟ ಕಾರ್ಯದರ್ಶಿ ರಾಘವ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya
error: Content is protected !!