25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

ಬೆಳ್ತಂಗಡಿ : ಜು.1 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜು.1 ರಂದು ರಾತ್ರಿ ಯಕ್ಷಗಾನ ವೈಭವ ಜರುಗಿತು.
ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ, ಸುರೇಶ ಕುಮಾರ್ ಆರ್.ಎನ್. ಅಶೋಕ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಲಾವಿದರಿಗೆ ಶಾಲು ಹೊದಿಸಿ ಗೌರವಿಸಿದರು.


ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಮಳೆಗಾಲದ ಮಹೋನ್ನತ ತೆಂಕು ಮತ್ತು ಬಡಗು ಸಂಯೋಜನೆಯಲ್ಲಿ ಭಾಗವತರಾಗಿ ಸತೀಶ ಶೆಟ್ಟಿ ಪಟ್ಲ,ಸೃಜನ್ ಹೆಗಡೆ, ಸುಧೀರ್ ಭಟ್ ಪೆರ್ಡೂರು, ಶಶಾಂಕ ಎಲಿಮಲೆ,ಹಿಮ್ಮೇಳ ತೆಂಕು:ಗುರು ಪ್ರಸಾದ್ ಬೊಳಿಂಜಡ್ಕ,ಕೌಶಿಕ್ ರಾವ್ ಪುತ್ತಿಗೆ,ಬಡಗು:ಶಶಿಕುಮಾರ್ ಆಚಾರ್ಯ ಉಡುಪಿ,ಪ್ರಜ್ವಲ್ ಕುಮಾರ್ ಮುಂದಾಡಿ, ಚಕ್ರತಾಳ: ಸುಂದರ ನಾಯ್ಕಪಾಣಾಜೆ, ನಿರೂಪಣೆ: ವಿನಾಯಕ ಭಟ್ ಗಾಳಿಮನೆ ಯಕ್ಷ ವೈಭವ ವನ್ನು ನಡೆಸಿದರು.


ನಾಳ ಯಕ್ಷಕೂಟ ಅಧ್ಯಕ್ಷರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವ ವಹಿಸಿದ್ದರು. ದೇವಸ್ಥಾನದ ವಿವಿಧ ಸಮಿತಿಯ ಸದಸ್ಯರು,ಹಿರಿಯ ಯಕ್ಷಗಾನ ಕಲಾವಿದರು ಹಾಗೂ ಕಲಾಭಿಮಾನಿಗಳು ಭಾಗವಹಿಸಿದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಸದಸ್ಯ,ನಾಳ ಯಕ್ಷ ಕೂಟ ಕಾರ್ಯದರ್ಶಿ ರಾಘವ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya
error: Content is protected !!