30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿ ಇದರ ಸುಳ್ಯ ಶಾಖೆಯಲ್ಲಿ ಸೇನಾ ತರಬೇತಿ ಪಡೆದ ಸುಳ್ಯ ನಿವಾಸಿ ಸೃಜನ್ ಕೆ. ಆರ್.ರವರು ಅಗ್ನಿಪಥ್ ಮೂಲಕ ಭಾರತೀಯ ಭೂಸೇನೆಗೆ ಆಯ್ಕೆಗೊಂಡಿದ್ದಾರೆ.
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕೊಡ್ದೋಳು ನಿವಾಸಿ ರಾಮಕೃಷ್ಣ ರೈ ಮತ್ತು ಗೀತಾ ದಂಪತಿಯ ಪುತ್ರ ಸೃಜನ್ ಕೆ.ಆರ್. ಕರ್ತವ್ಯಕ್ಕೆ ಅಸ್ಸಾಂಗೆ ತೆರಳಿದ್ದು , ಜು.1 ರಂದು ಅಲ್ಲಿನ ಅರ್ಟಿಲ್ಲರಿ ರೆಜಿಮೆಂಟ್ ವಿಭಾಗದಲ್ಲಿ ಕರ್ತವ್ಯ ಆರಂಭಿಸಿದ್ದರೆ.

2023ರ ಫೆಬ್ರವರಿ ತಿಂಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು, ಮಂಗಳೂರಿನಲ್ಲಿ ನಡೆದ ಸೇನಾ ಪರೀಕ್ಷೆ ಎದುರಿಸಿ, ತೇರ್ಗಡೆ ಹೊಂದಿ, ಮಹಾರಾಷ್ಟ್ರ ದ ನಾಸಿಕ್‌ನಲ್ಲಿ 32 ವಾರಗಳ ಸೇನಾ ತರಬೇತಿ ಪೂರ್ಣಗೊಳಿಸಿದ್ದರು.
ತನ್ನ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಎಣ್ಮೂರು ಪ್ರೌಢಶಾಲೆಯಲ್ಲಿ, ಪಿ.ಯು ಶಿಕ್ಷಣವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೂರೈಸಿ , ನಂತರ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪದವಿ ಮುಗಿಸಿದ್ದರು. ಬಳಿಕ ಸುಳ್ಯದ ವಿದ್ಯಾಮಾತಾ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಸೇನಾ ಪರೀಕ್ಷಾ ತರಬೇತಿಯನ್ನು ಪಡೆದುಕೊಂಡು ಇದೀಗ ಭೂ ಸೇನೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈರವರು ಇವರ ಸಾಧನೆಯನ್ನು ಮೆಚ್ಚಿ , ಸೇನೆಗೆ ಆಯ್ಕೆಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ , ಅಭಿನಂದಿಸಿದ್ದಾರೆ.

Related posts

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!