September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿ ಇದರ ಸುಳ್ಯ ಶಾಖೆಯಲ್ಲಿ ಸೇನಾ ತರಬೇತಿ ಪಡೆದ ಸುಳ್ಯ ನಿವಾಸಿ ಸೃಜನ್ ಕೆ. ಆರ್.ರವರು ಅಗ್ನಿಪಥ್ ಮೂಲಕ ಭಾರತೀಯ ಭೂಸೇನೆಗೆ ಆಯ್ಕೆಗೊಂಡಿದ್ದಾರೆ.
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕೊಡ್ದೋಳು ನಿವಾಸಿ ರಾಮಕೃಷ್ಣ ರೈ ಮತ್ತು ಗೀತಾ ದಂಪತಿಯ ಪುತ್ರ ಸೃಜನ್ ಕೆ.ಆರ್. ಕರ್ತವ್ಯಕ್ಕೆ ಅಸ್ಸಾಂಗೆ ತೆರಳಿದ್ದು , ಜು.1 ರಂದು ಅಲ್ಲಿನ ಅರ್ಟಿಲ್ಲರಿ ರೆಜಿಮೆಂಟ್ ವಿಭಾಗದಲ್ಲಿ ಕರ್ತವ್ಯ ಆರಂಭಿಸಿದ್ದರೆ.

2023ರ ಫೆಬ್ರವರಿ ತಿಂಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು, ಮಂಗಳೂರಿನಲ್ಲಿ ನಡೆದ ಸೇನಾ ಪರೀಕ್ಷೆ ಎದುರಿಸಿ, ತೇರ್ಗಡೆ ಹೊಂದಿ, ಮಹಾರಾಷ್ಟ್ರ ದ ನಾಸಿಕ್‌ನಲ್ಲಿ 32 ವಾರಗಳ ಸೇನಾ ತರಬೇತಿ ಪೂರ್ಣಗೊಳಿಸಿದ್ದರು.
ತನ್ನ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಎಣ್ಮೂರು ಪ್ರೌಢಶಾಲೆಯಲ್ಲಿ, ಪಿ.ಯು ಶಿಕ್ಷಣವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೂರೈಸಿ , ನಂತರ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪದವಿ ಮುಗಿಸಿದ್ದರು. ಬಳಿಕ ಸುಳ್ಯದ ವಿದ್ಯಾಮಾತಾ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಸೇನಾ ಪರೀಕ್ಷಾ ತರಬೇತಿಯನ್ನು ಪಡೆದುಕೊಂಡು ಇದೀಗ ಭೂ ಸೇನೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈರವರು ಇವರ ಸಾಧನೆಯನ್ನು ಮೆಚ್ಚಿ , ಸೇನೆಗೆ ಆಯ್ಕೆಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ , ಅಭಿನಂದಿಸಿದ್ದಾರೆ.

Related posts

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya
error: Content is protected !!