23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

ಬೆಳ್ತಂಗಡಿ: ಧಾರಾಕಾರ ಮಳೆಗೆ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು ಇದೀಗ ಬೆಳ್ತಂಗಡಿ ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡು ಒಂದು ವಾರದ ಒಳಗೆ ಸರಿಪಡಿಸಲು ಸೂಚನೆಯನ್ನು ನೀಡಿದ್ದಾರೆ.

ಜು.1 ರಂದು ವಿಪರೀತ ಮಳೆಯಿಂದಾಗಿ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಪರಿಣಾಮ ಮಕ್ಕಳನ್ನು ತುರ್ತಾಗಿ ಬೇರೆ ಕೊಠಡಿಗೆ ಸ್ಥಳಾಂತರಿಸಿದ ಶಿಕ್ಷಕರು ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಹಂಚು ಅತಿ ಶಿಥಿಲ ವ್ಯವಸ್ಥೆಗೆ ತಲುಪಿ ಕುಸಿತಗೊಂಡಿದೆ. ಆದಷ್ಟು ಬೇಗೆ ಸರಿಪಡಿಸುವಂತೆ ಅಧಿಖಾರಿಗಳಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಇಒ, ಜಿಲ್ಲಾ ಪಂಚಾಯತಿ ಇಂಜಿನಿಯರ್, ಗ್ರಾಮ ಪಂಚಾಯತಿ ಪಿಡಿಒ, ಗ್ರಾಮ ಸಹಾಯಕ, ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಉಪಸ್ಥಿತರಿದ್ದರು.

Related posts

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya
error: Content is protected !!