32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

ಬೆಳ್ತಂಗಡಿ :ಮಳೆಗಾಲ ಪ್ರಾರಂಭವಾದ ನಂತರವಂತೂ ಸರಿಯಾದ ರೀತಿಯಲ್ಲಿ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆಸಿ ಸಾರ್ವಜನಿಕ ಸಂಚಾರಕ್ಕೆ ಹಾಗೂ ಶಾಲೆಯ ಬಳಿ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ತ್ವರಿತ ಗತಿಯ ಕಾಮಗಾರಿ ಮಾಡಬೇಕು ಎಂದು ಸೂಚಿಸಿದ್ದರು.ಅದರೆ ಗುತ್ತಿಗೆದಾರರ ನಿಧಾನಗತಿ ಕಾಮಗಾರಿಯಿಂದ ಶಾಲಾ ಮಕ್ಕಳಿಗೆ ಸೇರಿದಂತೆ ಜನ ಸಾಮಾನ್ಯರಿಗೆ ವಾಹನ ಸವಾರರಿಗೆ ಮತ್ತಷ್ಟು ತೊಂದರೆಯಾಗುತ್ತಿರುವ ಬಗ್ಗೆ ಮನಗಂಡು ರಾತ್ರೋರಾತ್ರಿ ಶಾಸಕ ಹರೀಶ್ ಪೂಂಜ ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರಲ್ಲದೇ ಗುತ್ತಿಗೆದಾರರ ನಿಧಾನಗತಿ ಕಾಮಗಾರಿ ಬಗ್ಗೆ ಅಸಾಮಾಧಾನ ಗೊಂಡ ಶಾಸಕರು ಒಂದು ವಾರದೊಳಗೆ ಚರಂಡಿ ಸೇರಿದಂತೆ ಪ್ರಮುಖವಾದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕೆಂದು ಸೂಚಿಸಿದರು. ಕೆಲವೊಂದು ಕಡೆಗಳಲ್ಲಿ ಕೆಸರಿನಿಂದಾಗಿ ವಾಹನ ಸವಾರರಿಗೆ ತೊಂದರೆಯಾಗಿದೆ ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಅಲ್ಲಲ್ಲಿ ಚರಂಡಿಯಲ್ಲಿ ನೀರು ನಿಂತಿರುವುದನ್ನು ಸರಿಪಡಿಸುವಂತೆ ಸೂಚಿಸಿದರು. ಭಾರೀ ಮಳೆಯ ನಡುವೆಯೂ ಶಾಸಕರು ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ತೆರಳಿ ಸಮಸ್ಯೆಗಳನ್ನು ಖುದ್ದು ವೀಕ್ಷಿಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಭೇಟಿ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಂಜಿನಿಯ‌ರ್ ಶಿವಪ್ರಸಾದ್ ಅಜಿಲ, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!