September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

ಬೆಳ್ತಂಗಡಿ :ಮಳೆಗಾಲ ಪ್ರಾರಂಭವಾದ ನಂತರವಂತೂ ಸರಿಯಾದ ರೀತಿಯಲ್ಲಿ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆಸಿ ಸಾರ್ವಜನಿಕ ಸಂಚಾರಕ್ಕೆ ಹಾಗೂ ಶಾಲೆಯ ಬಳಿ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ತ್ವರಿತ ಗತಿಯ ಕಾಮಗಾರಿ ಮಾಡಬೇಕು ಎಂದು ಸೂಚಿಸಿದ್ದರು.ಅದರೆ ಗುತ್ತಿಗೆದಾರರ ನಿಧಾನಗತಿ ಕಾಮಗಾರಿಯಿಂದ ಶಾಲಾ ಮಕ್ಕಳಿಗೆ ಸೇರಿದಂತೆ ಜನ ಸಾಮಾನ್ಯರಿಗೆ ವಾಹನ ಸವಾರರಿಗೆ ಮತ್ತಷ್ಟು ತೊಂದರೆಯಾಗುತ್ತಿರುವ ಬಗ್ಗೆ ಮನಗಂಡು ರಾತ್ರೋರಾತ್ರಿ ಶಾಸಕ ಹರೀಶ್ ಪೂಂಜ ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರಲ್ಲದೇ ಗುತ್ತಿಗೆದಾರರ ನಿಧಾನಗತಿ ಕಾಮಗಾರಿ ಬಗ್ಗೆ ಅಸಾಮಾಧಾನ ಗೊಂಡ ಶಾಸಕರು ಒಂದು ವಾರದೊಳಗೆ ಚರಂಡಿ ಸೇರಿದಂತೆ ಪ್ರಮುಖವಾದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕೆಂದು ಸೂಚಿಸಿದರು. ಕೆಲವೊಂದು ಕಡೆಗಳಲ್ಲಿ ಕೆಸರಿನಿಂದಾಗಿ ವಾಹನ ಸವಾರರಿಗೆ ತೊಂದರೆಯಾಗಿದೆ ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಅಲ್ಲಲ್ಲಿ ಚರಂಡಿಯಲ್ಲಿ ನೀರು ನಿಂತಿರುವುದನ್ನು ಸರಿಪಡಿಸುವಂತೆ ಸೂಚಿಸಿದರು. ಭಾರೀ ಮಳೆಯ ನಡುವೆಯೂ ಶಾಸಕರು ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ತೆರಳಿ ಸಮಸ್ಯೆಗಳನ್ನು ಖುದ್ದು ವೀಕ್ಷಿಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಭೇಟಿ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಂಜಿನಿಯ‌ರ್ ಶಿವಪ್ರಸಾದ್ ಅಜಿಲ, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿಗೆ ಸತತ ನಾಲ್ಕನೇ ಬಾರಿ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!