September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

ಉಜಿರೆ: ವಿದ್ಯಾರ್ಥಿಗಳಲ್ಲಿ ಕಲಿಕೆ ಜೊತೆ ಜೊತೆಗೆ ವಿವಿಧ ಚಟುವಟಿಕೆಗಳ ಸಂಯೋಜನೆ ಮಾಡಿ ಅವರ ಕಲಿಕಾ ಹರಿವನ್ನು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಕಾರ್ಯಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ವಿದ್ಯಾರ್ಥಿಗಳ ತಂಡದೊಂದಿಗೆ ಭೇಟಿ ನೀಡಲಾಯಿತು.

ಹಳೆಯ ಕಾಲದ ನೆನಪುಗಳ ಸಮಗ್ರ ಭಂಡಾರವೇ ಆಗಿರುವ ವಸ್ತು ಸಂಗ್ರಹಾಲಯವನ್ನು ಸಂಪೂರ್ಣವಾಗಿ ವೀಕ್ಷಿಸಿ, ಹಲವಾರು ಮಾಹಿತಿಗಳನ್ನು ಕಲೆ ಹಾಕಿದರು ಅಲ್ಲದೇ ತಮಗಿರುವ ಸಂಶಯಗಳನ್ನ ಅಲ್ಲಿನ ಸಿಬ್ಬಂದಿ ಗಳೊಂದಿಗೆ ಚರ್ಚಿಸಿ ಪರಿಹರಿಸಿಕೊಂಡರು.
ನಂತರ ಹಳೆಯ ವಿಭಿನ್ನ ವಿನೂತನ ಕಾರುಗಳ ಸಂಗ್ರಹಾಲಯಕ್ಕೆ ತೆರಳಿ ವೀಕ್ಷಣೆ ಮಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಸತಿ ನಿಲಯದ ಪಾಲಕರು ಜೊತೆಗಿದ್ದು ಸಹಕರಿಸಿದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!