July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

ಉಜಿರೆ: ಪ್ರಸ್ತುತ ಕಾಲಘಟ್ಟದಲ್ಲಿ ತಂತ್ರಜ್ಞಾನದ ಶಿಕ್ಷಣ ಅತಿ ಮುಖ್ಯವಾಗಿದೆ. ಬರೀ ವಿದ್ಯೆ ಪಡೆದರೆ ಸಾಲದು; ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ವಿದ್ಯೆಯು ಯಾರಿಂದಲೂ ಕಸಿಯಲಾಗದ ಆಸ್ತಿ. ಜೀವನದಲ್ಲಿ ವಿದ್ಯೆ ಅತಿದೊಡ್ಡ ಸಂಪತ್ತು. ಈ ಸಂಪತ್ತು ಮುಂದಿನ ಜೀವನದಲ್ಲಿ ಇನ್ನಷ್ಟು ಹೆಚ್ಚಿಸಿಕೊಳ್ಳಿ ಎಂದರು. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಇದು ನಿಮ್ಮ ಮುಂದಿನ ಉದ್ಯೋಗಕ್ಕೆ ದಾರಿದೀಪವಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಲಾಯಿಲ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿ-ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಸುರೇಶ್ ಮೊಯಿಲಿ ಇವರು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 30 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಸೋಮನಾಥ್ ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರಾದ ಜಯಶ್ರೀ ಇವರು ನಿರ್ವಹಣೆ ಮಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.

Related posts

ಬಂದಾರು: ಮತಪ್ರಚಾರ ಮಹಾ ಅಭಿಯಾನ

Suddi Udaya

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya
error: Content is protected !!