22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

ಬೆಳ್ತಂಗಡಿ; ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಬಂಧಿಸಿದ್ದಾರೆ.


ಬೆಳ್ಳಾರೆಯಲ್ಲಿ ಮನೆಗೆ ನುಗ್ಗಿ ಸುಮಾರು ರೂ 1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000/- ಸೇರಿ ಒಟ್ಟು ರೂ 1,78,000/- ಮೌಲ್ಯದ ಮನೆಕಳ್ಳತನ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ ಪೊಲೀಸರು ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಬಂಧಿಸಿ ಆತನಿಂದ ಕಳವು ಮಾಡಿದ ಸೊತ್ತು ಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿರುತ್ತದೆ.

ಪ್ರಕರಣದ ಪತ್ತೆಗಾಗಿ ಕಾರ್ಯದಲ್ಲಿ, ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್, ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ಎಂ ಮತ್ತು ರಾಜೇಂದ್ರರವರುಗಳ ಮಾರ್ಗದರ್ಶನದಲ್ಲಿ, ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ರವರ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆಯವರು ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂಧಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತಾರೆ. ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ವಿಶೇಷ ಬಹುಮಾನ ಘೋಷಿಸಿದ್ದಾರೆ.

Related posts

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya
error: Content is protected !!