22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಾರಾವಿಯಲ್ಲಿ ಭತ್ತ ನಾಟಿ ಮತ್ತು ಯಂತ್ರ ಶ್ರೀ ಕಾರ್ಯಕ್ರಮವು ನಡೆಯಿತು.

ಶ್ರೀ ಕ್ಷೇ, ಧ, ಗ್ರಾ ಯೋಜನೆಯ ಯಂತ್ರ ಬ್ಯಾಂಕ್ ಮೆನೇಜರ್ ಉಮೇಶ್ ರವರು ಮಾತನಾಡಿ ಯೋಜನೆಯು ಭತ್ತ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸಿಹೆಚ್.ಎಸ್.ಸಿ ಕೇಂದ್ರದಲ್ಲಿ ಭತ್ತ ಕೃಷಿಗೆ ಯೋಗ್ಯವಾದ ಉಳುಮೆಗೆ, ನಾಟಿಗೆ ಕಟಾವುಗೆ ಕಡಿಮೆ ಬಾಡಿಗೆದರದಲ್ಲಿ ಮಷಿನ್ ಲಭ್ಯವಿದ್ದು ಹೆಚ್ಚಿನ ರೈತರು ಇದರ ಉಪಯೋಗ ಪಡೆದು ಕೊಳ್ಳುವತ್ತೇ ತಿಳಿಸಿದರು,
ಭತ್ತ ಕೃಷಿಗೆ ಸಸಿ ಮಡಿ ತಯಾರಿಸಿ ನಾಟಿಗೆ ಯೋಗ್ಯ ವಾದ ಉತ್ತಮ ಭತ್ತದ ತಳಿ ಆಯ್ಕೆ ಮಾಡಿ ಉತ್ತಮ ಗುಣಮಟ್ಟದ ಸಸಿ ಮಡಿಯನ್ನು ಯೋಜನೆಯಿಂದ ತರಬೇತಿ ಪಡೆದು ಪ್ರಶಾಂತ್ ಚಿತ್ತಾರ ರವರು ಕೇಂದ್ರೀಕ್ರತ್ ನರ್ಸರಿ ಮೂಲಕ ರೈತರಿಗೆ ಕಡಿಮೆ ದರದಲ್ಲಿ ಸಸಿ ಮಡಿ ನೀಡುತ್ತಿದ್ದಾರೆ ಇದರ ಪ್ರಯೋಜನವನ್ನು ರೈತರು ಪಡೆದು ಹೆಚ್ಚಿನ ಸಂಖ್ಯೆ ಯಲ್ಲಿ ಭತ್ತ ಕೃಷಿ ಮಾಡುವಂತೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಹಾಲು ಉತ್ಪಾದಕ ಸಂಘದ ನಿರ್ದೇಶಕರು ಸುಮನ್ ಹೆಗ್ಡೆ, ಸುಧಾಕರ್ ಪೂಜಾರಿ, ಯಂತ್ರಶ್ರೀ ಯೋಧ ಪ್ರಶಾಂತ್, ಧರ್ಣಪ್ಪ ಪೂಜಾರಿ, ಅಣ್ಣಿ ಪೂಜಾರಿ, ಕೇಶವ ಪೂಜಾರಿ, ನೀಲಯ್ಯ, ಸುಮಿತ್ರಾ ಕಮಲಾಕ್ಷಿ, ಈರಮ್ಮ, ಸುಶೀಲ, ಚಂದ್ರಪ್ಪ, ಯಶೋಧ, ವಶಾಂತಿ ಯಂತ್ರ ಚಾಲಕರ ಪುರಂದರ ಮುಂತಾದವರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya
error: Content is protected !!