September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

ಬೆಳ್ತಂಗಡಿ : ಜು.1 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜು.1 ರಂದು ರಾತ್ರಿ ಯಕ್ಷಗಾನ ವೈಭವ ಜರುಗಿತು.
ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಯಕ್ಷಗಾನ ಕಲಾವಿದ ದಿವಾಕರ ಆಚಾರ್ಯ, ಸುರೇಶ ಕುಮಾರ್ ಆರ್.ಎನ್. ಅಶೋಕ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಲಾವಿದರಿಗೆ ಶಾಲು ಹೊದಿಸಿ ಗೌರವಿಸಿದರು.


ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಮಳೆಗಾಲದ ಮಹೋನ್ನತ ತೆಂಕು ಮತ್ತು ಬಡಗು ಸಂಯೋಜನೆಯಲ್ಲಿ ಭಾಗವತರಾಗಿ ಸತೀಶ ಶೆಟ್ಟಿ ಪಟ್ಲ,ಸೃಜನ್ ಹೆಗಡೆ, ಸುಧೀರ್ ಭಟ್ ಪೆರ್ಡೂರು, ಶಶಾಂಕ ಎಲಿಮಲೆ,ಹಿಮ್ಮೇಳ ತೆಂಕು:ಗುರು ಪ್ರಸಾದ್ ಬೊಳಿಂಜಡ್ಕ,ಕೌಶಿಕ್ ರಾವ್ ಪುತ್ತಿಗೆ,ಬಡಗು:ಶಶಿಕುಮಾರ್ ಆಚಾರ್ಯ ಉಡುಪಿ,ಪ್ರಜ್ವಲ್ ಕುಮಾರ್ ಮುಂದಾಡಿ, ಚಕ್ರತಾಳ: ಸುಂದರ ನಾಯ್ಕಪಾಣಾಜೆ, ನಿರೂಪಣೆ: ವಿನಾಯಕ ಭಟ್ ಗಾಳಿಮನೆ ಯಕ್ಷ ವೈಭವ ವನ್ನು ನಡೆಸಿದರು.


ನಾಳ ಯಕ್ಷಕೂಟ ಅಧ್ಯಕ್ಷರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವ ವಹಿಸಿದ್ದರು. ದೇವಸ್ಥಾನದ ವಿವಿಧ ಸಮಿತಿಯ ಸದಸ್ಯರು,ಹಿರಿಯ ಯಕ್ಷಗಾನ ಕಲಾವಿದರು ಹಾಗೂ ಕಲಾಭಿಮಾನಿಗಳು ಭಾಗವಹಿಸಿದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಸದಸ್ಯ,ನಾಳ ಯಕ್ಷ ಕೂಟ ಕಾರ್ಯದರ್ಶಿ ರಾಘವ ಹೆಚ್. ಸ್ವಾಗತಿಸಿ, ವಂದಿಸಿದರು.

Related posts

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಸಿಂಧೂರ ಶೆಟ್ಟಿ ರಚಿಸಿದ ಸ್ಕ್ರಿಬಲ್ ಆರ್ಟ್ ಇಂಡಿಯಾ ಬುಕ್ ಆಪ್ ರೆಕಾರ್ಡ್‌ಗೆ ಸೇರ್ಪಡೆ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ: ಗ್ರಾಮೀಣ ಸಂಸ್ಕೃತಿ, ಸಾಂಪ್ರದಾಯಿಕ ಕ್ರೀಡೆಗಳ ಅನಾವರಣ

Suddi Udaya
error: Content is protected !!