27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿ ಇದರ ಸುಳ್ಯ ಶಾಖೆಯಲ್ಲಿ ಸೇನಾ ತರಬೇತಿ ಪಡೆದ ಸುಳ್ಯ ನಿವಾಸಿ ಸೃಜನ್ ಕೆ. ಆರ್.ರವರು ಅಗ್ನಿಪಥ್ ಮೂಲಕ ಭಾರತೀಯ ಭೂಸೇನೆಗೆ ಆಯ್ಕೆಗೊಂಡಿದ್ದಾರೆ.
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕೊಡ್ದೋಳು ನಿವಾಸಿ ರಾಮಕೃಷ್ಣ ರೈ ಮತ್ತು ಗೀತಾ ದಂಪತಿಯ ಪುತ್ರ ಸೃಜನ್ ಕೆ.ಆರ್. ಕರ್ತವ್ಯಕ್ಕೆ ಅಸ್ಸಾಂಗೆ ತೆರಳಿದ್ದು , ಜು.1 ರಂದು ಅಲ್ಲಿನ ಅರ್ಟಿಲ್ಲರಿ ರೆಜಿಮೆಂಟ್ ವಿಭಾಗದಲ್ಲಿ ಕರ್ತವ್ಯ ಆರಂಭಿಸಿದ್ದರೆ.

2023ರ ಫೆಬ್ರವರಿ ತಿಂಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು, ಮಂಗಳೂರಿನಲ್ಲಿ ನಡೆದ ಸೇನಾ ಪರೀಕ್ಷೆ ಎದುರಿಸಿ, ತೇರ್ಗಡೆ ಹೊಂದಿ, ಮಹಾರಾಷ್ಟ್ರ ದ ನಾಸಿಕ್‌ನಲ್ಲಿ 32 ವಾರಗಳ ಸೇನಾ ತರಬೇತಿ ಪೂರ್ಣಗೊಳಿಸಿದ್ದರು.
ತನ್ನ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಎಣ್ಮೂರು ಪ್ರೌಢಶಾಲೆಯಲ್ಲಿ, ಪಿ.ಯು ಶಿಕ್ಷಣವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೂರೈಸಿ , ನಂತರ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪದವಿ ಮುಗಿಸಿದ್ದರು. ಬಳಿಕ ಸುಳ್ಯದ ವಿದ್ಯಾಮಾತಾ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಸೇನಾ ಪರೀಕ್ಷಾ ತರಬೇತಿಯನ್ನು ಪಡೆದುಕೊಂಡು ಇದೀಗ ಭೂ ಸೇನೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈರವರು ಇವರ ಸಾಧನೆಯನ್ನು ಮೆಚ್ಚಿ , ಸೇನೆಗೆ ಆಯ್ಕೆಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ , ಅಭಿನಂದಿಸಿದ್ದಾರೆ.

Related posts

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!