22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿ ಇದರ ಸುಳ್ಯ ಶಾಖೆಯಲ್ಲಿ ಸೇನಾ ತರಬೇತಿ ಪಡೆದ ಸುಳ್ಯ ನಿವಾಸಿ ಸೃಜನ್ ಕೆ. ಆರ್.ರವರು ಅಗ್ನಿಪಥ್ ಮೂಲಕ ಭಾರತೀಯ ಭೂಸೇನೆಗೆ ಆಯ್ಕೆಗೊಂಡಿದ್ದಾರೆ.
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕೊಡ್ದೋಳು ನಿವಾಸಿ ರಾಮಕೃಷ್ಣ ರೈ ಮತ್ತು ಗೀತಾ ದಂಪತಿಯ ಪುತ್ರ ಸೃಜನ್ ಕೆ.ಆರ್. ಕರ್ತವ್ಯಕ್ಕೆ ಅಸ್ಸಾಂಗೆ ತೆರಳಿದ್ದು , ಜು.1 ರಂದು ಅಲ್ಲಿನ ಅರ್ಟಿಲ್ಲರಿ ರೆಜಿಮೆಂಟ್ ವಿಭಾಗದಲ್ಲಿ ಕರ್ತವ್ಯ ಆರಂಭಿಸಿದ್ದರೆ.

2023ರ ಫೆಬ್ರವರಿ ತಿಂಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು, ಮಂಗಳೂರಿನಲ್ಲಿ ನಡೆದ ಸೇನಾ ಪರೀಕ್ಷೆ ಎದುರಿಸಿ, ತೇರ್ಗಡೆ ಹೊಂದಿ, ಮಹಾರಾಷ್ಟ್ರ ದ ನಾಸಿಕ್‌ನಲ್ಲಿ 32 ವಾರಗಳ ಸೇನಾ ತರಬೇತಿ ಪೂರ್ಣಗೊಳಿಸಿದ್ದರು.
ತನ್ನ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಎಣ್ಮೂರು ಪ್ರೌಢಶಾಲೆಯಲ್ಲಿ, ಪಿ.ಯು ಶಿಕ್ಷಣವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೂರೈಸಿ , ನಂತರ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪದವಿ ಮುಗಿಸಿದ್ದರು. ಬಳಿಕ ಸುಳ್ಯದ ವಿದ್ಯಾಮಾತಾ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಸೇನಾ ಪರೀಕ್ಷಾ ತರಬೇತಿಯನ್ನು ಪಡೆದುಕೊಂಡು ಇದೀಗ ಭೂ ಸೇನೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈರವರು ಇವರ ಸಾಧನೆಯನ್ನು ಮೆಚ್ಚಿ , ಸೇನೆಗೆ ಆಯ್ಕೆಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ , ಅಭಿನಂದಿಸಿದ್ದಾರೆ.

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya
error: Content is protected !!