25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿ ಇದರ ಸುಳ್ಯ ಶಾಖೆಯಲ್ಲಿ ಸೇನಾ ತರಬೇತಿ ಪಡೆದ ಸುಳ್ಯ ನಿವಾಸಿ ಸೃಜನ್ ಕೆ. ಆರ್.ರವರು ಅಗ್ನಿಪಥ್ ಮೂಲಕ ಭಾರತೀಯ ಭೂಸೇನೆಗೆ ಆಯ್ಕೆಗೊಂಡಿದ್ದಾರೆ.
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕೊಡ್ದೋಳು ನಿವಾಸಿ ರಾಮಕೃಷ್ಣ ರೈ ಮತ್ತು ಗೀತಾ ದಂಪತಿಯ ಪುತ್ರ ಸೃಜನ್ ಕೆ.ಆರ್. ಕರ್ತವ್ಯಕ್ಕೆ ಅಸ್ಸಾಂಗೆ ತೆರಳಿದ್ದು , ಜು.1 ರಂದು ಅಲ್ಲಿನ ಅರ್ಟಿಲ್ಲರಿ ರೆಜಿಮೆಂಟ್ ವಿಭಾಗದಲ್ಲಿ ಕರ್ತವ್ಯ ಆರಂಭಿಸಿದ್ದರೆ.

2023ರ ಫೆಬ್ರವರಿ ತಿಂಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು, ಮಂಗಳೂರಿನಲ್ಲಿ ನಡೆದ ಸೇನಾ ಪರೀಕ್ಷೆ ಎದುರಿಸಿ, ತೇರ್ಗಡೆ ಹೊಂದಿ, ಮಹಾರಾಷ್ಟ್ರ ದ ನಾಸಿಕ್‌ನಲ್ಲಿ 32 ವಾರಗಳ ಸೇನಾ ತರಬೇತಿ ಪೂರ್ಣಗೊಳಿಸಿದ್ದರು.
ತನ್ನ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಎಣ್ಮೂರು ಪ್ರೌಢಶಾಲೆಯಲ್ಲಿ, ಪಿ.ಯು ಶಿಕ್ಷಣವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೂರೈಸಿ , ನಂತರ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪದವಿ ಮುಗಿಸಿದ್ದರು. ಬಳಿಕ ಸುಳ್ಯದ ವಿದ್ಯಾಮಾತಾ ಅಕಾಡೆಮಿ ತರಬೇತಿ ಕೇಂದ್ರದಲ್ಲಿ ಸೇನಾ ಪರೀಕ್ಷಾ ತರಬೇತಿಯನ್ನು ಪಡೆದುಕೊಂಡು ಇದೀಗ ಭೂ ಸೇನೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈರವರು ಇವರ ಸಾಧನೆಯನ್ನು ಮೆಚ್ಚಿ , ಸೇನೆಗೆ ಆಯ್ಕೆಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿ , ಅಭಿನಂದಿಸಿದ್ದಾರೆ.

Related posts

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!