July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

ಬೆಳ್ತಂಗಡಿ: ಧಾರಾಕಾರ ಮಳೆಗೆ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು ಇದೀಗ ಬೆಳ್ತಂಗಡಿ ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡು ಒಂದು ವಾರದ ಒಳಗೆ ಸರಿಪಡಿಸಲು ಸೂಚನೆಯನ್ನು ನೀಡಿದ್ದಾರೆ.

ಜು.1 ರಂದು ವಿಪರೀತ ಮಳೆಯಿಂದಾಗಿ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಪರಿಣಾಮ ಮಕ್ಕಳನ್ನು ತುರ್ತಾಗಿ ಬೇರೆ ಕೊಠಡಿಗೆ ಸ್ಥಳಾಂತರಿಸಿದ ಶಿಕ್ಷಕರು ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಹಂಚು ಅತಿ ಶಿಥಿಲ ವ್ಯವಸ್ಥೆಗೆ ತಲುಪಿ ಕುಸಿತಗೊಂಡಿದೆ. ಆದಷ್ಟು ಬೇಗೆ ಸರಿಪಡಿಸುವಂತೆ ಅಧಿಖಾರಿಗಳಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಇಒ, ಜಿಲ್ಲಾ ಪಂಚಾಯತಿ ಇಂಜಿನಿಯರ್, ಗ್ರಾಮ ಪಂಚಾಯತಿ ಪಿಡಿಒ, ಗ್ರಾಮ ಸಹಾಯಕ, ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya
error: Content is protected !!