July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕುಮಾರ್ ಕೊಯ್ಯೂರು ಇವರು INICET ಪರೀಕ್ಷೆಯಲಿ 679ರ್‍ಯಾಂಕ್ ಪಡೆದು ದೆಹಲಿಯ ಪ್ರತಿಷ್ಠಿತ ಎಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದಾರೆ.


ಎಂ.ಬಿ.ಬಿ.ಎಸ್ ಪದವಿಯನ್ನು ಕಾರವಾರದ ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಮುಗಿಸಿದ ಇವರು ತನ್ನ ಪಿಯುಸಿಯನ್ನು ಉಜಿರೆಯ ಎಸ್.ಡಿಎಂ ಪಿಯು ಕಾಲೇಜಿನಲ್ಲಿ 95.5 ಶೇಕಡಾ ಅಂಕದೊಂದಿಗೆ ಉತ್ತೀರ್ಣರಾಗಿದ್ದರು. ತನ್ನ ಪಿಯುಸಿ ಸಮಯದಲ್ಲಿ ಉಚಿತ ಪ್ರವೇಶ, ಉಚಿತ ಮಧ್ಯಾಹ್ನ ಊಟ ಹಾಗೂ ಉಚಿತ ನೀಟ್ ಹಾಗೂ ಸಿಇಟಿ ಪರೀಕ್ಷೆ ಕೋಚಿಂಗ್ ಒದಗಿಸಿದ ಪೂಜ್ಯ ಹೆಗ್ಗಡೆಯವರಿಗೆ ತಾನು ಆಭಾರಿಯಾಗಿದ್ದೇನೆ ಎನ್ನುವ ಇವರು ಪೂಜ್ಯರ ಆಶೀರ್ವಾದದಿಂದ ತನಗೆ ದೆಹಲಿಯ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ಸಾಧ್ಯವಾಯಿತು ಎನ್ನುತ್ತಾರೆ.


ಇವರ ತಂದೆ ರಾಮಣ್ಣ ಪೂಜಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಿಬ್ಬಂದಿಯಾಗಿದ್ದು, ಹಲವಾರು ವರ್ಷ ಸೇವೆ ಸಲ್ಲಿಸಿದ್ದರು. ಇವರ ತಾಯಿ ಶಾಂತಿ, ಅಜ್ಜಿ ಗುಲಾಬಿ ಹಾಗೂ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಇವರಿಗೆ ಶುಭ ಹಾರೈಸಿದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!