30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕುಮಾರ್ ಕೊಯ್ಯೂರು ಇವರು INICET ಪರೀಕ್ಷೆಯಲಿ 679ರ್‍ಯಾಂಕ್ ಪಡೆದು ದೆಹಲಿಯ ಪ್ರತಿಷ್ಠಿತ ಎಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದಾರೆ.


ಎಂ.ಬಿ.ಬಿ.ಎಸ್ ಪದವಿಯನ್ನು ಕಾರವಾರದ ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಮುಗಿಸಿದ ಇವರು ತನ್ನ ಪಿಯುಸಿಯನ್ನು ಉಜಿರೆಯ ಎಸ್.ಡಿಎಂ ಪಿಯು ಕಾಲೇಜಿನಲ್ಲಿ 95.5 ಶೇಕಡಾ ಅಂಕದೊಂದಿಗೆ ಉತ್ತೀರ್ಣರಾಗಿದ್ದರು. ತನ್ನ ಪಿಯುಸಿ ಸಮಯದಲ್ಲಿ ಉಚಿತ ಪ್ರವೇಶ, ಉಚಿತ ಮಧ್ಯಾಹ್ನ ಊಟ ಹಾಗೂ ಉಚಿತ ನೀಟ್ ಹಾಗೂ ಸಿಇಟಿ ಪರೀಕ್ಷೆ ಕೋಚಿಂಗ್ ಒದಗಿಸಿದ ಪೂಜ್ಯ ಹೆಗ್ಗಡೆಯವರಿಗೆ ತಾನು ಆಭಾರಿಯಾಗಿದ್ದೇನೆ ಎನ್ನುವ ಇವರು ಪೂಜ್ಯರ ಆಶೀರ್ವಾದದಿಂದ ತನಗೆ ದೆಹಲಿಯ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ಸಾಧ್ಯವಾಯಿತು ಎನ್ನುತ್ತಾರೆ.


ಇವರ ತಂದೆ ರಾಮಣ್ಣ ಪೂಜಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಿಬ್ಬಂದಿಯಾಗಿದ್ದು, ಹಲವಾರು ವರ್ಷ ಸೇವೆ ಸಲ್ಲಿಸಿದ್ದರು. ಇವರ ತಾಯಿ ಶಾಂತಿ, ಅಜ್ಜಿ ಗುಲಾಬಿ ಹಾಗೂ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಇವರಿಗೆ ಶುಭ ಹಾರೈಸಿದರು.

Related posts

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya
error: Content is protected !!