26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

ಕಳೆಂಜ: ಇಲ್ಲಿಯ ಶಿಬರಾಜೆ ಕುಟ್ರುಪ್ಪಾಡಿ ನಿವಾಸಿ ರಾಮಣ್ಣ (ದಿನೇಶ್) ನಾಯ್ಕರ ಸೋಗೆ ಮನೆ ಛಾವಣಿಯು ಜೂ.29 ರಾತ್ರಿ ಸುರಿದ ಜಡಿಮಳೆಗೆ ಮುಂಜಾನೆ 3.30ಕ್ಕೆ ಸಂಪೂರ್ಣ ಛಾವಣಿ ಕುಸಿದಿದ್ದು, ಈ ವೇಳೆ ಮನೆಯಲ್ಲಿ ನಿದ್ರಿಸುತ್ತಿದ್ದ ರಾಮಣ್ಣ (ದಿನೇಶ್) ನಾಯ್ಕ, ಪತ್ನಿ ವಾರಿಜ, ಪುತ್ರ ಅಪಾಯದಿಂದ ಪಾರಾಗಿದ್ದಾರೆ.


ಈ ಸಂದರ್ಭ ಅತಂತ್ರರಾದ ರಾಮಣ್ಣರವರ ಕುಟುಂಬದವರಿಗೆ ಪಕ್ಕದ ಮನೆಯ ಅನೂಪ್ ನಾಯ್ಕ ದೇರ್ಯ ಆಶ್ರಯ ನೀಡಿದ್ದರು. ವಿಷಯ ತಿಳಿದು ತಕ್ಷಣ ಧಾವಿಸಿದ ಬಿಜೆಪಿ ಬೂತ್ ಸಮಿತಿ 174ರ ಅಧ್ಯಕ್ಷ ಹರೀಶ ವಳಗುಡ್ಡೆ, ಸದಸ್ಯರು ಮತ್ತು ಕಾರ್ಯಕರ್ತರು ಮುರಿದು ಬಿದ್ದ ಮನೆಯ ಸಾಮಾನುಗಳನ್ನು ವಿಲೇವಾರಿ ಮಾಡಿ ಅವರ ಕಷ್ಟಕ್ಕೆ ಸ್ಪಂದಿಸಿದರು.


ಬಡವರಾದ ರಾಮಣ್ಣ (ದಿನೇಶ) ನಾಯ್ಕರವರಿಗೆ ಒಂದು ತಾತ್ಕಾಲಿಕ ಮನೆಯನ್ನು ಒಂದು ವಾರದೊಳಗೆ ನಿರ್ಮಿಸಿ ಕೊಡಬೇಕೆಂದು ಪಣತೊಟ್ಟ ಹರೀಶ ವಳಗುಡ್ಡೆಯವರು, ಕಾರ್ಯಕರ್ತರು, ಗ್ರಾಮಸ್ಥರು, ದಾನಿಗಳನ್ನು ಸಂಪರ್ಕಿಸುತ್ತಿದ್ದಾರೆ.
ಸದ್ಯದ ಮಟ್ಟಿಗೆ ರಾಮಣ್ಣ ನಾಯ್ಕರ ಕುಟುಂಬದವರು ಸಂಬಂಧಿಕರಾದ ದಯಾನಂದ ನಾಯ್ಕರ ಮನೆಯಲ್ಲಿ ಉಳಿದುಕೊಂಡಿದ್ದಾರೆ.

Related posts

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya
error: Content is protected !!