September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

ಕಳೆಂಜ: ಇಲ್ಲಿಯ ಶಿಬರಾಜೆ ಕುಟ್ರುಪ್ಪಾಡಿ ನಿವಾಸಿ ರಾಮಣ್ಣ (ದಿನೇಶ್) ನಾಯ್ಕರ ಸೋಗೆ ಮನೆ ಛಾವಣಿಯು ಜೂ.29 ರಾತ್ರಿ ಸುರಿದ ಜಡಿಮಳೆಗೆ ಮುಂಜಾನೆ 3.30ಕ್ಕೆ ಸಂಪೂರ್ಣ ಛಾವಣಿ ಕುಸಿದಿದ್ದು, ಈ ವೇಳೆ ಮನೆಯಲ್ಲಿ ನಿದ್ರಿಸುತ್ತಿದ್ದ ರಾಮಣ್ಣ (ದಿನೇಶ್) ನಾಯ್ಕ, ಪತ್ನಿ ವಾರಿಜ, ಪುತ್ರ ಅಪಾಯದಿಂದ ಪಾರಾಗಿದ್ದಾರೆ.


ಈ ಸಂದರ್ಭ ಅತಂತ್ರರಾದ ರಾಮಣ್ಣರವರ ಕುಟುಂಬದವರಿಗೆ ಪಕ್ಕದ ಮನೆಯ ಅನೂಪ್ ನಾಯ್ಕ ದೇರ್ಯ ಆಶ್ರಯ ನೀಡಿದ್ದರು. ವಿಷಯ ತಿಳಿದು ತಕ್ಷಣ ಧಾವಿಸಿದ ಬಿಜೆಪಿ ಬೂತ್ ಸಮಿತಿ 174ರ ಅಧ್ಯಕ್ಷ ಹರೀಶ ವಳಗುಡ್ಡೆ, ಸದಸ್ಯರು ಮತ್ತು ಕಾರ್ಯಕರ್ತರು ಮುರಿದು ಬಿದ್ದ ಮನೆಯ ಸಾಮಾನುಗಳನ್ನು ವಿಲೇವಾರಿ ಮಾಡಿ ಅವರ ಕಷ್ಟಕ್ಕೆ ಸ್ಪಂದಿಸಿದರು.


ಬಡವರಾದ ರಾಮಣ್ಣ (ದಿನೇಶ) ನಾಯ್ಕರವರಿಗೆ ಒಂದು ತಾತ್ಕಾಲಿಕ ಮನೆಯನ್ನು ಒಂದು ವಾರದೊಳಗೆ ನಿರ್ಮಿಸಿ ಕೊಡಬೇಕೆಂದು ಪಣತೊಟ್ಟ ಹರೀಶ ವಳಗುಡ್ಡೆಯವರು, ಕಾರ್ಯಕರ್ತರು, ಗ್ರಾಮಸ್ಥರು, ದಾನಿಗಳನ್ನು ಸಂಪರ್ಕಿಸುತ್ತಿದ್ದಾರೆ.
ಸದ್ಯದ ಮಟ್ಟಿಗೆ ರಾಮಣ್ಣ ನಾಯ್ಕರ ಕುಟುಂಬದವರು ಸಂಬಂಧಿಕರಾದ ದಯಾನಂದ ನಾಯ್ಕರ ಮನೆಯಲ್ಲಿ ಉಳಿದುಕೊಂಡಿದ್ದಾರೆ.

Related posts

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya
error: Content is protected !!