ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುವುದನ್ನೇ ಕಾಯಕವಾಗಿರಿಸಿಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಿಜೆಪಿ ಶಾಸಕರುಗಳೊಂದಿಗೆ ಜು. 03 ರಂದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಹಾಗೂ ಶಾಸಕ ಮಿತ್ರರು, ವಿಧಾನ ಪರಿಷತ್‌ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!