23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಗೇರುಕಟ್ಟೆ: ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಭಾರತಾಂಬೆಯ ಸೇವೆಗೈದು ನಿವೃತ್ತಿ ಹೊಂದಿ ಊರಿಗೆ ಆಗಮಿಸಿದ ನ್ಯಾಯತರ್ಪು ಗ್ರಾಮದ ವಂಜಾರೆ ಯೋಧ ವಿಕ್ರಂ ಜೆ.ಎನ್. ರವರಿಗೆ ಅಭಿನಂದನಾ ಕಾರ್ಯಕ್ರಮ ಜು. 03 ರಂದು ಗೇರುಕಟ್ಟೆ ಸಹಕಾರಿ ಭವನದಲ್ಲಿ ನಡೆಯಿತು.

ಬೆಳಿಗ್ಗೆ ಬೆಳ್ತಂಗಡಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಅಭಿನಂದನಾ ಸಮಿತಿಯ ಅಧ್ಯಕ್ಷ ವಸಂತ ಮಜಲು ಅಧ್ಯಕ್ಷತೆಯನ್ನು ವಹಿಸಿದರು.

ಈ ವೇಳೆ ಕಳಿಯ, ನ್ಯಾಯತರ್ಪು, ಓಡಿಲ್ನಾಳ ಅಭಿನಂದನಾ ಸಮಿತಿಯಿಂದ ಹಾಗೂ ಎಲ್ಲ ಸಂಘ ಸಂಸ್ಥೆಗಳಿಂದ ಯೋಧ ವಿಕ್ರಂ ಜೆ.ಎನ್ ದಂಪತಿಯನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಕಳಿಯ ಗ್ರಾ.ಪಂ. ಅಧ್ಯಕ್ಷ ದಿವಾಕರ ಎಂ., ಬೆಳ್ತಂಗಡಿ ಮಾಜಿ ಸೈನಿಕ ಸಂಘದ ಗೌರವಾಧ್ಯಕ್ಷ ಮೇಜರ್ ಜನರಲ್ ಎಂ.ವಿ. ಭಟ್, ಮಾವಿನಕಟ್ಟೆ ಸಂತ ಅನ್ನಾರವರ ಚರ್ಚ್, ಫಾದರ್ ಬೆರ್ನಾಡ್,, ಬೆಳ್ತಂಗಡಿ ಮಾಜಿ ಸೈನಿಕರ ಸಂಘ ಅಧ್ಯಕ್ಷ ಮಹಮ್ಮದ್ ರಫಿ, ನಿವೃತ್ತ ಹಾಸನ ಸೈನಿಕ ಕ್ಯಾಪ್ಟನ್ ಬೆಟ್ಟೇ ಗೌಡ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಪರಪ್ಪು ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಬೂಬಕ್ಕರ್ ಪೆಲತ್ತಳಿಕೆ, ಸದಸ್ಯರಾದ ತಂಗಚ್ಚನ್ ಸುರೇಶ್ ಗೌಡ, ಸುಬ್ರಮಣಿ, ದಿನೇಶ್ ಗೌಡ, ಯೋಧನ ಪೋಷಕರಾದ ಶ್ರೀಮತಿ ನಾಗವೇಣಿ ಮತ್ತು ಜನಾರ್ಧನ ಪೂಜಾರಿ ವಂಜಾರೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಸಂಚಾಲಕರು, ಕೋಶಾಧಿಕಾರಿ ಮತ್ತು ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಾಜಿ ಸೈನಿಕ ಸಂಘದ ಕಾರ್ಯದರ್ಶಿ ಉಮೇಶ್ ಕಾರ್ಯಕ್ರಮ ನಿರೂಪಿಸಿ, ಸುರೇಶ ಆರ್. ಎನ್ ಸ್ವಾಗತಿಸಿ, ನೇವಿಲ್ ಸ್ಟಿವನ್ ಮೋರಸ್ ಧನ್ಯವಾದವಿತ್ತರು.

Related posts

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya
error: Content is protected !!