ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Leave a Comment

error: Content is protected !!