25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya
error: Content is protected !!