23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya
error: Content is protected !!