July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya
error: Content is protected !!