ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!