26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya
error: Content is protected !!