30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕುಮಾರ್ ಕೊಯ್ಯೂರು ಇವರು INICET ಪರೀಕ್ಷೆಯಲಿ 679ರ್‍ಯಾಂಕ್ ಪಡೆದು ದೆಹಲಿಯ ಪ್ರತಿಷ್ಠಿತ ಎಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದಾರೆ.


ಎಂ.ಬಿ.ಬಿ.ಎಸ್ ಪದವಿಯನ್ನು ಕಾರವಾರದ ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಮುಗಿಸಿದ ಇವರು ತನ್ನ ಪಿಯುಸಿಯನ್ನು ಉಜಿರೆಯ ಎಸ್.ಡಿಎಂ ಪಿಯು ಕಾಲೇಜಿನಲ್ಲಿ 95.5 ಶೇಕಡಾ ಅಂಕದೊಂದಿಗೆ ಉತ್ತೀರ್ಣರಾಗಿದ್ದರು. ತನ್ನ ಪಿಯುಸಿ ಸಮಯದಲ್ಲಿ ಉಚಿತ ಪ್ರವೇಶ, ಉಚಿತ ಮಧ್ಯಾಹ್ನ ಊಟ ಹಾಗೂ ಉಚಿತ ನೀಟ್ ಹಾಗೂ ಸಿಇಟಿ ಪರೀಕ್ಷೆ ಕೋಚಿಂಗ್ ಒದಗಿಸಿದ ಪೂಜ್ಯ ಹೆಗ್ಗಡೆಯವರಿಗೆ ತಾನು ಆಭಾರಿಯಾಗಿದ್ದೇನೆ ಎನ್ನುವ ಇವರು ಪೂಜ್ಯರ ಆಶೀರ್ವಾದದಿಂದ ತನಗೆ ದೆಹಲಿಯ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ಸಾಧ್ಯವಾಯಿತು ಎನ್ನುತ್ತಾರೆ.


ಇವರ ತಂದೆ ರಾಮಣ್ಣ ಪೂಜಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಿಬ್ಬಂದಿಯಾಗಿದ್ದು, ಹಲವಾರು ವರ್ಷ ಸೇವೆ ಸಲ್ಲಿಸಿದ್ದರು. ಇವರ ತಾಯಿ ಶಾಂತಿ, ಅಜ್ಜಿ ಗುಲಾಬಿ ಹಾಗೂ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಇವರಿಗೆ ಶುಭ ಹಾರೈಸಿದರು.

Related posts

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!