23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕುಮಾರ್ ಕೊಯ್ಯೂರು ಇವರು INICET ಪರೀಕ್ಷೆಯಲಿ 679ರ್‍ಯಾಂಕ್ ಪಡೆದು ದೆಹಲಿಯ ಪ್ರತಿಷ್ಠಿತ ಎಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದಾರೆ.


ಎಂ.ಬಿ.ಬಿ.ಎಸ್ ಪದವಿಯನ್ನು ಕಾರವಾರದ ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಮುಗಿಸಿದ ಇವರು ತನ್ನ ಪಿಯುಸಿಯನ್ನು ಉಜಿರೆಯ ಎಸ್.ಡಿಎಂ ಪಿಯು ಕಾಲೇಜಿನಲ್ಲಿ 95.5 ಶೇಕಡಾ ಅಂಕದೊಂದಿಗೆ ಉತ್ತೀರ್ಣರಾಗಿದ್ದರು. ತನ್ನ ಪಿಯುಸಿ ಸಮಯದಲ್ಲಿ ಉಚಿತ ಪ್ರವೇಶ, ಉಚಿತ ಮಧ್ಯಾಹ್ನ ಊಟ ಹಾಗೂ ಉಚಿತ ನೀಟ್ ಹಾಗೂ ಸಿಇಟಿ ಪರೀಕ್ಷೆ ಕೋಚಿಂಗ್ ಒದಗಿಸಿದ ಪೂಜ್ಯ ಹೆಗ್ಗಡೆಯವರಿಗೆ ತಾನು ಆಭಾರಿಯಾಗಿದ್ದೇನೆ ಎನ್ನುವ ಇವರು ಪೂಜ್ಯರ ಆಶೀರ್ವಾದದಿಂದ ತನಗೆ ದೆಹಲಿಯ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ಸಾಧ್ಯವಾಯಿತು ಎನ್ನುತ್ತಾರೆ.


ಇವರ ತಂದೆ ರಾಮಣ್ಣ ಪೂಜಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಿಬ್ಬಂದಿಯಾಗಿದ್ದು, ಹಲವಾರು ವರ್ಷ ಸೇವೆ ಸಲ್ಲಿಸಿದ್ದರು. ಇವರ ತಾಯಿ ಶಾಂತಿ, ಅಜ್ಜಿ ಗುಲಾಬಿ ಹಾಗೂ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಇವರಿಗೆ ಶುಭ ಹಾರೈಸಿದರು.

Related posts

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya
error: Content is protected !!