July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ವೈದ್ಯ ವೃತ್ತಿ ಕೇವಲ ವೃತ್ತಿಯಲ್ಲ, ಅದು ಸೇವೆ. ರೋಗಿಗಳ ಸೇವೆಗಾಗಿ ತನ್ನ ಹೆಚ್ಚಿನ ಸಮಯವನ್ನು ಮುಡಿಪಾಗಿಡುವ ವೈದ್ಯರದ್ದು ಒತ್ತಡದ ಜೀವನ. ಮನರಂಜನೆ ಇಲ್ಲದೆ ಗ್ರಾಮೀಣ ಪ್ರದೇಶದ ಆಸ್ಪತ್ರೆಯಲ್ಲಿ ವೈದ್ಯಕೀಯ ವೃತ್ತಿ ಮಾಡುವ ನಮ್ಮಂತಹ ಆಸ್ಪತ್ರೆಯ ವೈದ್ಯರ ಸೇವೆ ನಿಜವಾಗಿಯೂ ಶ್ಲಾಘನೀಯ ಎಂದರು.


ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಅಮ್ಮನವರ ಆಶೀರ್ವಾದ ಮತ್ತು ಆದೇಶದಂತೆ, ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸೇವಾ ಮನೋಭಾವ ಮತ್ತು ವೃತ್ತಿ ನಿಷ್ಠೆಯಿಂದ ದುಡಿಯುತ್ತಿರುವ ನಮ್ಮ ಆಸ್ಪತ್ರೆಯ ವೈದ್ಯಕೀಯ ತಂಡ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದ್ದು, ಸ್ವತಃ ರೋಗಿಗಳೇ ವೈದ್ಯರ ಮತ್ತು ಆಸ್ಪತ್ರೆಯ ಸೇವೆಯನ್ನು ಶ್ಲಾಘಿಸುತ್ತಿದ್ದಾರೆ ಎಂದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಮಾತನಾಡಿ ಗ್ರಾಮೀಣ ಪ್ರದೇಶದ ಈ ಆಸ್ಪತ್ರೆಯಲ್ಲಿ ಸಾಮಾನ್ಯ ಜನರಿಗೆ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಹಗಲಿರುಳು ದುಡಿಯುತ್ತಿರುವ ಎಲ್ಲಾ ವೈದ್ಯರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಹಾಗೂ ಸಂದರ್ಶನ ವೈದ್ಯರನ್ನು ಸನ್ಮಾನಿಸಲಾಯಿತು. ವಿವಿಧ ಮನರಂಜನಾ ಹಾಗೂ ಫನ್ನಿ ಗೇಮ್ಸ್‌ಗಳಲ್ಲಿ ಆಸ್ಪತ್ರೆಯ ವೈದ್ಯರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಖುಷಿಪಟ್ಟರು. ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಆಸ್ಪತ್ರೆಯ ವೈದ್ಯರು, ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!