22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

ಕಳೆಂಜ: ಇಲ್ಲಿಯ ಶಿಬರಾಜೆ ಕುಟ್ರುಪ್ಪಾಡಿ ನಿವಾಸಿ ರಾಮಣ್ಣ (ದಿನೇಶ್) ನಾಯ್ಕರ ಸೋಗೆ ಮನೆ ಛಾವಣಿಯು ಜೂ.29 ರಾತ್ರಿ ಸುರಿದ ಜಡಿಮಳೆಗೆ ಮುಂಜಾನೆ 3.30ಕ್ಕೆ ಸಂಪೂರ್ಣ ಛಾವಣಿ ಕುಸಿದಿದ್ದು, ಈ ವೇಳೆ ಮನೆಯಲ್ಲಿ ನಿದ್ರಿಸುತ್ತಿದ್ದ ರಾಮಣ್ಣ (ದಿನೇಶ್) ನಾಯ್ಕ, ಪತ್ನಿ ವಾರಿಜ, ಪುತ್ರ ಅಪಾಯದಿಂದ ಪಾರಾಗಿದ್ದಾರೆ.


ಈ ಸಂದರ್ಭ ಅತಂತ್ರರಾದ ರಾಮಣ್ಣರವರ ಕುಟುಂಬದವರಿಗೆ ಪಕ್ಕದ ಮನೆಯ ಅನೂಪ್ ನಾಯ್ಕ ದೇರ್ಯ ಆಶ್ರಯ ನೀಡಿದ್ದರು. ವಿಷಯ ತಿಳಿದು ತಕ್ಷಣ ಧಾವಿಸಿದ ಬಿಜೆಪಿ ಬೂತ್ ಸಮಿತಿ 174ರ ಅಧ್ಯಕ್ಷ ಹರೀಶ ವಳಗುಡ್ಡೆ, ಸದಸ್ಯರು ಮತ್ತು ಕಾರ್ಯಕರ್ತರು ಮುರಿದು ಬಿದ್ದ ಮನೆಯ ಸಾಮಾನುಗಳನ್ನು ವಿಲೇವಾರಿ ಮಾಡಿ ಅವರ ಕಷ್ಟಕ್ಕೆ ಸ್ಪಂದಿಸಿದರು.


ಬಡವರಾದ ರಾಮಣ್ಣ (ದಿನೇಶ) ನಾಯ್ಕರವರಿಗೆ ಒಂದು ತಾತ್ಕಾಲಿಕ ಮನೆಯನ್ನು ಒಂದು ವಾರದೊಳಗೆ ನಿರ್ಮಿಸಿ ಕೊಡಬೇಕೆಂದು ಪಣತೊಟ್ಟ ಹರೀಶ ವಳಗುಡ್ಡೆಯವರು, ಕಾರ್ಯಕರ್ತರು, ಗ್ರಾಮಸ್ಥರು, ದಾನಿಗಳನ್ನು ಸಂಪರ್ಕಿಸುತ್ತಿದ್ದಾರೆ.
ಸದ್ಯದ ಮಟ್ಟಿಗೆ ರಾಮಣ್ಣ ನಾಯ್ಕರ ಕುಟುಂಬದವರು ಸಂಬಂಧಿಕರಾದ ದಯಾನಂದ ನಾಯ್ಕರ ಮನೆಯಲ್ಲಿ ಉಳಿದುಕೊಂಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!